ಬೆಂಗಳೂರು: ರಾಜ್ಯ ಸರ್ಕಾರವು ಸೇವೆಯಿಂದ ನಿವೃತ್ತರಾದ ಹಿರಿಯ ನಾಗರಿಕರನ್ನು ಸರ್ಕಾರಿ ಇಲಾಖೆಗಳಲ್ಲಿ ಪುನಃ ನೇಮಕ ಮಾಡಿಕೊಳ್ಳಲು ಚಿಂತನೆ ನಡೆಸಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಅವರು ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಏರ್ಪಡಿಸಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಗೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸರ್ಕಾರಿ ಇಲಾಖೆಯಲ್ಲಿ ಹಿರಿಯರ ಅನುಭವ ಬಳಸಿಕೊಂಡು ಉತ್ತಮ ಆಡಳಿತ ನೀಡುವ ಉದ್ದೇಶದಿಂದ ಹಿರಿಯ ನಾಗರಿಕರನ್ನು ನೇಮಿಸಿಕೊಳ್ಳಲು ಸಂಬಂಧಪಟ್ಟ ಇಲಾಖೆಯು ಯೋಜನೆ ರೂಪಿಸಬೇಕು ಎಂದರು .
ರಾಜ್ಯ ಸರ್ಕಾರ ಹಿರಿಯ ನಾಗರಿಕರಿಗಾಗಿ ಅನೇಕ ಯೋಜನೆಗಳನ್ನು ರೂಪಿಸಿದ್ದು, 60 ವರ್ಷ ಮೇಲ್ಟಪಟ್ಟವರಿಗೆ 2 ಬಾರಿ ಉಚಿತ ಆರೋಗ್ಯ ತಪಾಸಣೆ ವ್ಯವಸ್ಥೆಗೆ ಶೀಘ್ರವೇ ಚಾಲನೆ ನೀಡಲಾಗುವುದು ಎಂದು ಹೇಳಿದ್ದಾರೆ.