News Karnataka Kannada
Thursday, May 02 2024
ಬೆಂಗಳೂರು ನಗರ

ಬೆಂಗಳೂರು: ಮಳೆಯಿಂದ ಹಾನಿಯಾದ ಮನೆಗಳಿಗೆ 10 ಸಾವಿರ ರೂ. ಪರಿಹಾರ ಸೂಚಿಸಿದ ಬಸವರಾಜ ಬೊಮ್ಮಾಯಿ

7000 CC cameras installed under Safe City Project- CM Bommai
Photo Credit : News Kannada

ಬೆಂಗಳೂರು: ಮಳೆಯಿಂದ ಹಾನಿಯಾದ ಮನೆಗಳಿಗೆ ತಕ್ಷಣ 10 ಸಾವಿರ ಪರಿಹಾರ ನೀಡುವಂತೆ ಸೂಚಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆರೆಕಟ್ಟೆಗಳಿರುವ ಗ್ರಾಮಗಳಲ್ಲಿ ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ.

ಮಳೆ ಹಾನಿ ಪರಿಹಾರ ನೀಡಲು ಹಿಂದೆ ಮುಂದೆ ನೋಡಬಾರದು. ಬಿದ್ದಿರುವ ವಿದ್ಯುತ್​ ಕಂಬಗಳನ್ನ 24 ಗಂಟೆಗಳಲ್ಲಿ ದುರಸ್ತಿಗೊಳಿಸುವಂತೆ ಬೆಸ್ಕಾಂಗೆ ಸೂಚನೆ ನೀಡಲಾಗಿದೆ.

ಜಲಾವೃತ ಪ್ರದೇಶಗಳಲ್ಲಿನ ಜನರಿಗೆ ಆಶ್ರಯ ನೀಡಲು ಸೂಚಿಸಲಾಗಿದ್ದು, ಎಲ್ಲ ಜಿಲ್ಲಾಧಿಕಾರಿಗಳ ಖಾತೆಯಲ್ಲಿ 900 ಕೋಟಿ ರೂ. ಇದೆ. ಬೆಳೆ ಸಮೀಕ್ಷೆ ಮಾಡಿ, ಪರಿಹಾರಕ್ಕೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.

16 ಜಿಲ್ಲೆಗಳ ಡಿಸಿಗಳ ಜೊತೆ ನಿನ್ನ ಸಭೆಯನ್ನ ಮಾಡಿದ್ದೇನೆ. ಅಧಿಕಾರಿಗಳಿಂದ ಮಾಹಿತಿ ಪಡೆದು ಸೂಚನೆ ನೀಡಿದ್ದೇನೆ. ಬೆಂಗಳೂರು-ಮೈಸೂರು ಸಂಪರ್ಕಕ್ಕೆ ಪರ್ಯಾಯ ಮಾರ್ಗಕ್ಕೆ ಸೂಚನೆಯನ್ನು ನೀಡಲಾಗಿದೆ. ನಮ್ಮ ಸಿಎಸ್​ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಜತೆ ಸಭೆ ಮಾಡಲಾಗಿದೆ ಎಂದು ಹೇಳಿದರು.

ದೆಹಲಿ ಭೇಟಿ ಕುರಿತು ಯಡಿಯೂರಪ್ಪ ಜೊತೆ ಮಾತುಕತೆ

ದೆಹಲಿ ಭೇಟಿ ಕುರಿತು ಯಡಿಯೂರಪ್ಪ ಜೊತೆ ಸಿಎಂ ಬೊಮ್ಮಾಯಿ ಮಾತುಕತೆ ಮಾಡಿದ್ದು, ಪಕ್ಷದ ಸಂಘಟನೆ ಕುರಿತು, ಪಕ್ಷದ ಕಾರ್ಯಕ್ರಮಗಳ ಕುರಿತು ಬಿಎಸ್​​ವೈ ಜತೆ ಚರ್ಚೆ ಮಾಡಿದ್ದೇನೆ. ರಾಜ್ಯದ 6 ಕಡೆಗಳಲ್ಲಿ ದೊಡ್ಡ ರ್ಯಾಲಿಗಳನ್ನು ಮಾಡುತ್ತೇವೆ. ಸೆ.8ರಂದು ಜನೋತ್ಸವ ಸಮಾವೇಶದ ಕುರಿತು ಮಾತುಕತೆ ಮಾಡಲಾಗಿದೆ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು