ಬೆಂಗಳೂರು: ವೃಷಭಾವತಿ ನಗರದ ವಾರ್ಡ್ ನಂ.102 ರ ಎನ್.ಜಿ.ಓ ಎಸ್ ಕಾಲೋನಿಯಲ್ಲಿ ನಿರ್ಮಿಸಿರುವ ಅಟಲ್ ಬಿಹಾರಿ ವಾಜಪೇಯಿ ಸರ್ಕಾರಿ ಪ್ರಾಥಮಿಕ ಪಾಠಶಾಲೆ ಕಟ್ಟಡವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ ಸಚಿವರುಗಳಾದ ಕೆ.ಗೋಪಾಲಯ್ಯ, ವಿ ಸೋಮಣ್ಣ, ಡಾ.ಸಿ.ಎನ್ ಅಶ್ವತ್ಥನಾರಾಯಣ, ಡಾ.ಕೆ.ಸುಧಾಕರ್, ಬಿಬಿಎಂಪಿಯ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್, ಆಡಳಿತಗಾರರಾದ ರಾಕೇಶ್ ಸಿಂಗ್, ಡಾ.ತ್ರಿಲೋಕ ಚಂದ್ರ ಸೇರಿದಂತೆ ಮತ್ತಿತರರು ಹಾಜರಿದ್ದರು.
ಶಕ್ತಿಗಣಪತಿ ನಗರದ ವಾರ್ಡ್ ನಂ.14ರ ಶಂಕರನಾಗ್ ಬಸ್ ನಿಲ್ದಾಣ ಹತ್ತಿರ ನಿರ್ಮಿಸಿರುವ ಬಿಬಿಎಂಪಿ ಪ್ರೌಢಶಾಲೆ ಹಾಗೂ ಕಾಲೇಜು ಕಟ್ಟಡ ಹಾಗೂ ಮಹಾಲಕ್ಷ್ಮೀಪುರಂ ಬಿಬಿಎಂಪಿ ರೆಫರಲ್ ಆಸ್ಪತ್ರೆ ಕಟ್ಟಡವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು.