ಬೆಂಗಳೂರು: ಜಲಾವೃತವಾಗಿರುವ ಬೆಂಗಳೂರಿನ ವಿವಿಧ ಪ್ರದೇಶಗಳಿಗೆ ಸಿದ್ದರಾಮಯ್ಯ ಇಂದು ಭೇಟಿ ನೀಡಿ ಸ್ಥಳೀಯ ನಿವಾಸಿಗಳ ಸಮಸ್ಯೆ ಆಲಿಸಿದರು.
ಯಮಲೂರು ಇಪ್ಸಿಲಾನ್ ಬಡಾವಣೆ, ಬೆಳ್ಳಂದೂರು ರಿಂಗ್ ರಸ್ತೆ ಎಕೋ ಸ್ಪೇಸ್ ಬಡಾವಣೆ, ರೈನ್ ಬೋ ಬಡಾವಣೆ ಮುಂತಾದ ಸ್ಥಳಗಳಿಗೆ ಅವರು ಭೇಟಿ ನೀಡಿದರು.
ಜಲಾವೃತ್ತವಾಗಿರುವ ಇಪ್ಸಿಲಾನ್ ಬಡಾವಣೆಯಲ್ಲಿ ಟ್ಯೂಬ್ ಬೋಟ್ನಲ್ಲಿ ತೆರಳಿ ಸಿದ್ದರಾಮಯ್ಯ ಸುತ್ತಮುತ್ತಲಿನ ಪ್ರದೇಶಗಳನ್ನು ವೀಕ್ಷಿಸಿದರು. ಬಳಗೆರೆಯ ದಿಶಾ ಅಪಾರ್ಟ್ಮೆಂಟ್ನ ನಿವಾಸಿಗಳ ಸಮಸ್ಯೆ ಆಲಿಸಿದ ಅವರು, ಬಳಿಕ ಮುನ್ನೇಕೊಳಾಲ ಗ್ರಾಮಕ್ಕೆ ಭೇಟಿ ನೀಡಿದರು. ಅಲ್ಲಿನ ಕೊಳಗೇರಿ ನಿವಾಸಿಗಳ ಸಮಸ್ಯೆ ಆಲಿಸಿದ ಸಿದ್ದರಾಮಯ್ಯ, ಹೊದಿಕೆಗಳನ್ನು ವಿತರಿಸಿದರು.
ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ಕಾಂಗ್ರೆಸ್ ಕಾರ್ಯಕರ್ತರು ಇದ್ದರು.