ಬೆಂಗಳೂರು: ಸಿದ್ದರಾಮಯ್ಯ ಸರ್ಕಾರ ಹುಟ್ಟುಹಾಕಿದ್ದ ಕರ್ನಾಟಕ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ.
ಈ ವಿಷಯದ ಕುರಿತು ಗೌರಿಬಿದನೂರು ತಾಲ್ಲೂಕಿನ ವಿದುರಾಶ್ವತ್ಥದಲ್ಲಿ ಪ್ರತಿಕ್ರಿಯಿಸಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಾತನಾಡಿ ಹೈಕೋರ್ಟ್ ಎಸಿಬಿ ರದ್ದುಗೊಳಿಸಿರುವ ವಿಚಾರದ ಕುರಿತು ಆದೇಶವನ್ನು ಇನ್ನು ನಾನು ನೋಡಿಲ್ಲ. ಆ ಆದೇಶವನ್ನು ನೋಡಿದ ನಂತರ ಪೂರ್ಣ ಪ್ರಮಾಣದಲ್ಲಿ ಪ್ರತಿಕ್ರಿಯಿಸುತ್ತೇವೆ ಎಂದು ತಿಳಿಸಿದರು.
ಲೋಕಾಯುಕ್ತದ ಬೇರ್ಪಡಿಸಿ ಎಸಿಬಿ ರಚಿಸಿದ್ದೆವು. ಹೈಕೋರ್ಟ್ ತೀರ್ಮಾನ ಗೌರವಿಸುತ್ತೇವೆ. ಆದೇಶ ಏನಿದೆ ಎನ್ನುವುದನ್ನು ನೋಡಿಲ್ಲ. ಆದೇಶ ನೋಡಿದ ನಂತರ ಪ್ರತಿಕ್ರಿಯಿಸುತ್ತೇನೆ ಎಂದರು.
ಎಸಿಬಿ ಸ್ವತಂತ್ರ ತನಿಖಾ ಸಂಸ್ಥೆ ಆಗಿತ್ತು. ಕರ್ನಾಟದಲ್ಲಿ ಅಷ್ಟೇ ಅಲ್ಲ ಅನೇಕ ರಾಜ್ಯಗಳಲ್ಲಿ ಎಸಿಬಿ ಇದೆ. ಎಸಿಬಿ ಲೋಕಾಯುಕ್ತದಲ್ಲಿ ಇರಬೇಕು. ಸ್ವತಂತ್ರ ಅಸ್ತಿತ್ವ ಬೇಡ ಎಂದು ಈಗ ಹೈಕೋರ್ಟ್ ತೀರ್ಮಾನಿಸಿದೆ ಎಂದರು