News Karnataka Kannada
Monday, May 06 2024
ಬೆಂಗಳೂರು ನಗರ

ಬೆಂಗಳೂರು: ಅಪೌಷ್ಠಿಕತೆ ನಿವಾರಣೆಗೆ ಕಾರ್ಪೊರೇಟ್ ಕಂಪೆನಿಗಳ ಜತೆ ಹೆಜ್ಜೆ- ಡಾ. ಶಾಲಿನಿ ರಜನೀಶ್

Steps to be taken with corporate stake holders to tackle malnutrition Shalini Rajneesh
Photo Credit : By Author

ಬೆಂಗಳೂರು: ಕರ್ನಾಟಕವನ್ನು ಅಪೌಷ್ಠಿಕ ಹಾಗೂ ಅನೀಮಿಯಾ ಮುಕ್ತ ರಾಜ್ಯವನ್ನಾಗಿಸಲು ಕಾರ್ಪೊರೇಟ್ ಕಂಪನಿಗಳ ಜೊತೆಗೆ ಸರ್ಕಾರ ಕೈಜೋಡಿಸಲಿದೆ ಎಂದು ಯೋಜನೆ, ಸಾಂಖ್ಯಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ತಿಳಿಸಿದರು.

ವಿಕಾಸ ಸೌಧದಲ್ಲಿ ಸರ್ಕಾರದ ಸಿಎಸ್‌ಆರ್(ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ) ಪೋರ್ಟಲ್ ಆಕಾಂಕ್ಷ ಬಗೆಗೆ ಸತ್ವ ಹಾಗೂ ಇತರ ಕಂಪನಿಗಳ ಸಹಯೋಗದಿಂದಿಗೆ ಹಮ್ಮಿಕೊಳ್ಳಲಾದ ರಾಜ್ಯದಲ್ಲಿ ಪೌಷ್ಟಿಕತೆ ಹಾಗೂ ಆರೋಗ್ಯ ನಿರ್ವಹಣೆ ಕುರಿತ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಸರ್ಕಾರದ ಯೋಜನೆ ಇಲಾಖೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕಾರ್ಪೊರೇಟ್ ವಲಯದ ಸಹಕಾರದೊಂದಿಗೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಸಿಎಸ್‌ಆರ್ ಅಡಿ ಕಂಪನಿಗಳು ಧನಸಹಾಯದಿಂದ ಸಹ ಯೋಜನೆಗಳ ಯಶಸ್ಸಿಗೆ ಕಾರಣವಾಗಿದೆ. ಸರ್ಕಾರದ ಜೊತೆಗೆ ಖಾಸಗಿ ಕಂಪನಿಗಳು, ಆರೋಗ್ಯ ರಕ್ಷಣೆ, ಪೌಷ್ಟಿಕಾಂಶ ನಿರ್ವಹಣೆ, ಆಹಾರ ಹಾಗೂ ಇನ್ನಿತರ ಆದ್ಯತಾ ಕ್ಷೇತ್ರಗಳಲ್ಲಿ ಕೈ ಜೋಡಿಸುತ್ತದೆ. ಇದರಿಂದ ಈಗಿರುವ ಕಾರ್ಯಕ್ರಮಗಳ ಮುನ್ನಡೆಯುವುದರ ಜೊತೆಗೆ ಹೊಸ ತಂತ್ರಜ್ಞಾನ ಅನ್ವೇಷಣೆ, ಆವಿಷ್ಕಾರಕ್ಕೂ ಸಹ ನಾಂದಿ ಹಾಕಲಿದೆ.

ಇಂದು ಭಾಗವಹಿಸಿದ್ದ 30 ಕಾರ್ಪೊರೇಟ್ ಕಂಪೆನಿಗಳಲ್ಲಿ ಪ್ರಮುಖ ಕಂಪನಿಗಳಾದ ಇನ್ಫೋಸಿಸ್, ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್, ಸ್ಪೂರ್ತಿ ಐಟಿಸಿ, ಹೆಚ್‌ಎಎಲ್, ಸಿಪ್ಲ, ಎಂಬಸ್ಸಿ ಮುಂತಾದವುಗಳು ಸೇರಿದೆ. ಗ್ರಾಮೀಣ ಭಾಗಗಳಿಗೂ ಆರೋಗ್ಯ ಸೇವೆಗಳು ತಲುಪಬೇಕೆಂದು ಎಲ್ಲರ ಉದ್ದೇಶವಾಗಿದೆ. ಮಕ್ಕಳ, ತಾಯಂದಿರ ಅಪೌಷ್ಟಿಕತೆ ಕಡಿಮೆ ಮಾಡಿ ಸ್ವಸ್ಥ ಕರ್ನಾಟಕ ನಿರ್ಮಿಸುವುದು ನಮ್ಮೆಲ್ಲರ ಗುರಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಯೋಜನೆ ಇಲಾಖೆ ಕಾರ್ಯದರ್ಶಿಗಳಾದ ರಿಚರ್ಡ್ ವಿನ್ಸೆಂಟ್ ಡಿಸೋಜ ಹಾಗೂ ಇನ್ನಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು