ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸಲು ಒಂದೆರಡು ದಿನಗಳಿರುವಾಗ ಮಾತ್ರ ರಸ್ತೆ ದುರಸ್ತಿ ಮಾಡಬೇಕೆಂದು ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ ನಿರ್ಧರಿಸಿದೆ.
ಆದ್ದರಿಂದ ಬೆಂಗಳೂರಿನ ರಸ್ತೆಗಳು ಸದಾ ಕಾಲ ಚೆನ್ನಾಗಿರಬೇಕೆಂದರೆ ಮೋದಿಯವರು ತಿಂಗಳಿಗೊಮ್ಮೆ ಬರುತ್ತಿರಬೇಕು ಎಂದು ಆಗ್ರಹಿಸಿ ಆಮ್ ಆದ್ಮಿ ಪಾರ್ಟಿಯು ವಿನೂತನ ಚಳವಳಿ ನಡೆಸಿತು.