ಬೆಂಗಳೂರು: ವಿಧಾನಸಭೆ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಮಾ.17ರಂದು ಬಿಡುಗಡೆ ಸಾಧ್ಯತೆ ಇದೆ. ಮಾ.16ರಂದು ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಸಭೆ ಕರೆಯಲಾಗಿದೆ.
ಮರುದಿನ ಮಾ.17ರಂದು ಪಕ್ಷದ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಅಲ್ಲಿ ಅಂತಿಮ ತೀರ್ಮಾನ ನಡೆಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ತಿಳಿಸಿದರು.
ಪ್ರಧಾನಿ ಮೋದಿ ಅವರು ರೌಡಿ ಶೀಟರ್ಗೆ ಕೈಮುಗಿಯುವ ಬಗ್ಗೆ ಕೇಳಿದ ಪ್ರಶ್ನೆಗೆ ಅವರ ಪಕ್ಷಕ್ಕೆ ಯಾರು ಬೇಕೋ ಅವರನ್ನು ಸೇರಿಸಿಕೊಂಡಿದ್ದಾರೆ. ಅತ್ಯಾಚಾರಿಗಳು, ಲಂಚಬಾಕರು, ದಂಧೆಕೋರರರನ್ನು ಜತೆಯಲ್ಲಿ ಇಟ್ಟಿಕೊಳ್ಳಲಿ. ಅವರ ಪಕ್ಷದ ಬಗ್ಗೆ ನಾನ್ಯಾಕೆ ಮಾತನಾಡಲಿ ಎಂದರು.