News Karnataka Kannada
Saturday, April 27 2024
ಬೆಂಗಳೂರು ನಗರ

ಬೆಂಗಳೂರು: ವಿದ್ಯುತ್ ಉತ್ಪಾದನೆಯ ಪರವಾನಗಿಯಲ್ಲಿ ಆಗಿರುವ ಅವ್ಯವಹಾರವನ್ನು ತನಿಖೆ ಮಾಡಲಾಗುವುದು!

Basavaraj Bommai (2)
Photo Credit : Twitter

ಬೆಂಗಳೂರು: ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಂದಿನ ಸರ್ಕಾರದ ಅವಧಿಯಲ್ಲಿ ಖಾಸಗಿಯವರಿಗೆ ಸೋಲಾರ್ ನಿಂದ ವಿದ್ಯುತ್ ಉತ್ಪಾದನೆಗೆ ನೀಡಿರುವ ಪರವಾನಗಿಯಲ್ಲಿ ಆಗಿರುವ ಅವ್ಯವಹಾರವನ್ನು ಮುಚ್ಚಿಹಾಕಲು ಪ್ರಯತ್ನ ಮಾಡುತ್ತಿದ್ದಾರೆ. ಕೇವಲ 7 ಸೆಕೆಂಡಿನಲ್ಲಿ ಆನ್ ಲೈನ್ ಮೂಲಕ ನೀಡಿರುವ ಪಟ್ಟಿಯನ್ನು ನೀಡಿದರೆ ಯಾವ ರೀತಿ ಆಗಿದೆ ಎಂದು ತಿಳಿಯುತ್ತದೆ. ಅದರ ಬಗ್ಗೆ ತನಿಖೆ ಮಾಡಲಾಗುತ್ತಿದೆ ಎಂದರು.

ಎಲ್ಲಾ ಆಯಾಮಗಳಲ್ಲಿ ತನಿಖೆ:

ಶಾಸಕ ರೇಣುಕಾಚಾರ್ಯ ಅವರ ಸಹೋದರನ ನಿಗೂಢ ಸಾವಿಗೆ ಸಂಬಂಧಿಸಿದಂತೆ ಶಾಸಕರೊಂದಿಗೆ ಮಾತನಾಡಿದ್ದು, ಅವರ ಪ್ರಕಾರ ಏನು ನಡೆದಿದೆ ಎಂದು ಮಾಹಿತಿಯನ್ನು ನೀಡಿ, ಸೂಕ್ತ ನಿರ್ದೇಶನವನ್ನು ಐ.ಜಿ ಹಾಗೂ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ನೀಡುವುದಾಗಿ ತಿಳಿಸಿದ್ದೇನೆ. ಮರಣೋತ್ತರ ಪರೀಕ್ಷೆಯಲ್ಲಿ ಬಹುತೇಕ ಸತ್ಯಾಂಶ ಹೊರಬರುತ್ತದೆ ನಂತರ ತನಿಖೆಯನ್ನು ಯಾವ ದಿಕ್ಕಿನಲ್ಲಿ ತೆಗೆದುಕೊಂಡು ಹೋಗಬೇಕೆಂದು ನಿರ್ಧರಿಸಲಾಗುತ್ತದೆ. ಎಲ್ಲಾ ಆಯಾಮಗಳಲ್ಲಿ ತನಿಖೆ ಮಾಡಲಾಗುವುದು ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು