ಬೆಂಗಳೂರು, ಆ. 28: ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯಾಗುವ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಈ ಬಗ್ಗೆ ಚರ್ಚೆಯೇ ಆಗಿಲ್ಲ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯದವರೊಂದಿಗೆ ಮಾತನಾಡಿದರು. ನಳಿನ್ ಕುಮಾರ್ ಕಟೀಲ್ ಅವರು ಕಳೆದ ಮೂರು ವರ್ಷಗಳಿಂದ ಪಕ್ಷವನ್ನು ಅತ್ಯಂತ ಸಮರ್ಥವಾಗಿ. ಮುನ್ನಡೆಸಿದ್ದಾರೆ. ಸುಮಾರು 8- 10 ಬಾರಿ ರಾಜ್ಯವನ್ನು ಸುತ್ತಿದ್ದಾರೆ.ಬೂತ್ ಮಟ್ಟದಿಂದ ಸಂಘಟನೆ ಮಾಡಿದ್ದಾರೆ.
ಗ್ರಾಮ ಪಂಚಾಯಿತಿ ಚುನಾವಣೆ ಮುನ್ನ ಹಾಗೂ ನಂತರ ವಿಧಾನ ಪರಿಷತ್ ಚುನಾವಣೆ , ಉಪ ಚುನಾವಣೆ ಎಲ್ಲವನ್ನೂ ಸಮರ್ಥವಾಗಿ ಸಂಘಟಿಸಿ ಎದುರಿಸಿದ್ದಾರೆ. ಯಶಸ್ವಿಯಾಗಿ ಮಾಡಿದ್ದಾರೆ. ಅವರ ನೇತೃತ್ವದಲ್ಲಿ ಮುಂದುವರೆಯುತ್ತಿದ್ದೇವೆ. ಅವರ ನೇತೃತ್ವ ಪಕ್ಷಕ್ಕೆ ಇನ್ನಷ್ಟು ಬಲ ನೀಡಲಿದೆ ಎಂದರು.