ಬೆಂಗಳೂರು: ಕರ್ನಾಟಕ ಅಂಚೆ ನೌಕರರ ಸಾಹಿತ್ಯ ಬಳಗ, ಸುಮಂಗಲಿ ಸೇವಾ ಆಶ್ರಮ, ಕರ್ನಾಟಕ ಗಾಂಧಿ ಸ್ಮಾರಕ ನಿಧಿವತಿಯಿಂದ ರಾಜ್ಯ ಮಟ್ಟದ ತೃತೀಯ ಅಂಚೆ ನೌಕರರ ಸಾಹಿತ್ಯ ಸಮ್ಮೇಳನ ಹಾಗೂ ಅಂಚೆ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭ ಬೆಂಗಳೂರಿನಲ್ಲಿಂದು ನಡೆಯಿತು.
ಸಮೇಳನಾಧ್ಯಕ್ಷೆ ಸಾಹಿತಿ ಇಂದಿರಾ ಕೃಷ್ಣಪ್ಪ, ಕರ್ನಾಟಕ ವಲಯದ ಸಿಪಿಎಂಜಿ ರಾಜೇಂದ್ರ ಕುಮಾರ್, ಚಿತ್ರ ನಿರ್ದೇಶಕ, ನಿರ್ಮಾಪಕ ಮದನ್ ಮಲ್ಲು, ವಿಧಾನ ಸದಸ್ಯ ಡಿ.ಎಸ್.ವೀರಯ್ಯ, ಸುಮಂಗಲಿ ಸೇವಾಶ್ರಮದ ಸುಶೀಲಮ್ಮ ಮತ್ತಿತರರು ಹಾಜರಿದ್ದರು.
ಇದೇ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಡಿ.ಎಸ್.ವೀರಯ್ಯ ನವರಿಗೆ ಅಂಚೆ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.