ಬೆಂಗಳೂರು: ಜೆಡಿಎಸ್ ಪಕ್ಷವನ್ನು ಮುಳುಗುವ ಹಡಗು ಎಂದು ಕರೆಯುವವರಿಗೆ ಹೇಗೆ ಉತ್ತರಿಸಬೇಕು ಎಂಬುದು ನನಗೆ ತಿಳಿದಿದೆ ಎಂದು ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಅವರು ಗುರುವಾರ ಹೇಳಿದ್ದಾರೆ.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಾವೆಲ್ಲರೂ ಒಟ್ಟಾಗಿ ಜೆಡಿಎಸ್ ಗೆಲುವನ್ನು ಖಚಿತಪಡಿಸಿಕೊಳ್ಳಬೇಕು. ಪಕ್ಷದ ವಿರುದ್ಧ ಅಪಪ್ರಚಾರ ಮಾಡುವವರಿಗೆ ತಕ್ಕ ಉತ್ತರ ನೀಡಲಾಗುವುದು ಎಂದು ಹೇಳಿದರು.
ಬೆಂಗಳೂರಿನಲ್ಲಿ ಸಂಭಾವ್ಯ ಅಭ್ಯರ್ಥಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ದೇವೇಗೌಡರು, ಎಸ್ಸಿ ಮತ್ತು ಎಸ್ಟಿಗಳಿಗೆ ಮೀಸಲಾತಿ ಹೆಚ್ಚಿಸುವ ಬಗ್ಗೆ ಚರ್ಚೆ ನಡೆಸಲಿ ಎಂದು ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರಿಗೆ ಸವಾಲು ಹಾಕಿದರು. “ನಾನು ಸಾರ್ವಜನಿಕ ಚರ್ಚೆಗೆ ಸಿದ್ಧ” ಎಂದು ಅವರು ಹೇಳಿದರು.
2023ರ ವರೆಗೆ ವಿಶ್ರಾಂತಿ ಪಡೆಯದೇ ಹೋರಾಟ ನಡೆಸಲು ನಿರ್ಧರಿಸಿದ್ದೇನೆ. ಮುಂಬರುವ ವಿಧಾನಸಭಾಗೆ ವಿಶ್ರಾಂತಿ ಪಡೆಯದೇ ಹೋರಾಟ ನಡೆಸಲು ಚುನಾವಣೆಯಲ್ಲಿ ಜೆಡಿಎಸ್ಗೆ 123 ಸ್ಥಾನಗಳ ಗುರಿ ನೀಡಿದ್ದೇವೆ ಎಂದರು.
ಪಕ್ಷಕ್ಕಾಗಿ ಹೋರಾಡುತ್ತಿರುವ ಎಚ್ಡಿ ಕುಮಾರಸ್ವಾಮಿ ಅವರ ಕೈಗಳನ್ನು ಎಲ್ಲರೂ ಬಲಪಡಿಸಬೇಕು ಎಂದು ದೇವೇಗೌಡರು ಹೇಳಿದರು. “ಈ ಹಂತದಲ್ಲಿ ನಾನು ನನ್ನ ಹೋರಾಟವನ್ನು ನಿಲ್ಲಿಸುವುದಿಲ್ಲ. ಕುಮಾರಸ್ವಾಮಿ ಅವರಿಗೆ ಅಧಿಕಾರ ನೀಡುತ್ತೇನೆ ಎಂದರು.
ನಾನು ಬಿಜೆಪಿ ಮತ್ತು ಕಾಂಗ್ರೆಸ್ ಎರಡನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಅವರ ಬಗ್ಗೆ ಹಗುರವಾಗಿ ಮಾತನಾಡಲು ನಾನು ಮುಂದಾಗುವುದಿಲ್ಲ. ನಾವು ಎರಡೂ ಪಕ್ಷಗಳ ವಿರುದ್ಧ ಹೋರಾಡಬೇಕಾಗಿದೆ ಎಂದು ಅವರು ಹೇಳಿದರು.