ಬೆಂಗಳೂರು: ಬಾಲಿವುಡ್ ನಟ ಸೋನು ಸೂದ್ ಅವರ ‘ಶ್ರೀಮಂತ ಸೇರಿದಂತೆ ಮೂರು ಕನ್ನಡ ಚಲನಚಿತ್ರಗಳು ಶುಕ್ರವಾರ ಕರ್ನಾಟಕದಲ್ಲಿ ತೆರೆಗೆ ಬಂದಿವೆ. ‘ಡೇರ್ ಡೆವಿಲ್ ಮುಸ್ತಫಾ’, ಹಾಕಿ ಆಟದ ಕುರಿತಾದ ‘ಜೆರ್ಸಿ ನಂಬರ್ 10’ ಮತ್ತು ‘ಸುಮನ್’ ಇತರ ಚಿತ್ರಗಳು ತೆರೆಗೆ ಬಂದಿವೆ.
‘ಶ್ರೀಮಂತ’ ಚಿತ್ರವು ಕಳೆದ ತಿಂಗಳು ಬಿಡುಗಡೆಯಾಗಬೇಕಿತ್ತು, ಆದರೆ ಮಾದರಿ ನೀತಿ ಸಂಹಿತೆಯಿಂದಾಗಿ ಮುಂದೂಡಲಾಗಿತ್ತು. ರೈತರ ಜೀವನಾಧಾರಿತ ಶ್ರೀಮಂತ ಚಿತ್ರದಲ್ಲಿ ಹಿರಿಯ ರಾಜಕಾರಣಿಗಳಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಬಸವರಾಜ ಹೊರಟ್ಟಿ, ಈಶ್ವರ ಖಂಡ್ರೆ ಕಾಣಿಸಿಕೊಂಡಿದ್ದಾರೆ. ರಮೇಶ್ ಹಾಸನ್ ಚಿತ್ರದ ನಿರ್ದೇಶಕರು. ಸೋನು ಸೂದ್ ಜೊತೆಗೆ ಕ್ರಾಂತಿ ಮತ್ತು ಕಲ್ಯಾಣಿ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ‘ಡೇರ್ ಡೆವಿಲ್ ಮುಸ್ತಫಾ’ ಹಾಸ್ಯಮಯ ನಾಟಕವಾಗಿದ್ದು, ಕನ್ನಡದ ಖ್ಯಾತ ಲೇಖಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿಯವರ ಕಥೆಯ ಸಾರಾಂಶ ಒಳಗೊಂಡಿದೆ. ‘ಜೆರ್ಸಿ ನಂಬರ್ 10’ ಹಾಕಿ ಆಟಗಾರನ ಪ್ರೇಮಕಥೆಯಾಗಿದೆ. ನಿರ್ಮಾಪಕರಲ್ಲಿ ಒಬ್ಬರಾಗಿರುವ ರಾಜ್ಯ ಮಟ್ಟದ ಹಾಕಿ ಆಟಗಾರ ಆದ್ಯಾ ತಿಮ್ಮಯ್ಯ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರವನ್ನು ಆದ್ಯಾ ತಿಮ್ಮಯ್ಯ ಮತ್ತು ರಶಿನ್ ಸುಬ್ಬಯ್ಯ ಸಹ-ನಿರ್ಮಾಣ ಮಾಡುತ್ತಿದ್ದಾರೆ.
ಬೇಸಿಗೆ ಕಾಲದಲ್ಲಿ ಸಾರ್ವಜನಿಕರು ತಮ್ಮ ಆರೋಗ್ಯ ಸುಧಾರಣೆಗೆ ಹೆಚ್ಚಿನ ಒತ್ತು ನೀಡಬೇಕು. ಜೀರ್ಣಕ್ರಿಯೆ ಉತ್ತಮಗೊಳಿಸಲು ಶರೀರದ ದಾಹ ನಿವಾರಣೆಗಾಗಿ ಆರೋಗ್ಯಕರ…
ಕುರುಬ ಸಮಾಜ ಯಾವತ್ತೂ ನ್ಯಾಯದ ಪರವಾಗಿದೆ. ಹಾಗಾಗಿ ಯೋಗ್ಯ ಅಭ್ಯರ್ಥಿಯಾದ ರಾಜು ಆಲಗೂರರಿಗೆ ಬೆಂಬಲ ನೀಡುತ್ತದೆ ಎಂದು ಮಾಜಿ ಜಿಪಂ…
ಹಸಿ ಈರುಳ್ಳಿಯನ್ನು ತಿನ್ನುವುದರಿಂದ ಸಾಕಷ್ಟು ಲಾಭಗಳೂ ಇವೆ. ಈ ಬೇಸಗೆಯಲ್ಲಂತೂ ಆಗಾಗ ಸಲಾಡ್ಗಳ ರೂಪದಲ್ಲಾದರೂ ಹಸಿ ಈರುಳ್ಳಿ ಬಳಸಬೇಕು.
ಈವೆಂಟ್ ಮ್ಯಾನೆಜ್ಮೆಂಟ್ ಮಾಡುವ ಯುವತಿಗೆ ಮತ್ತು ಬರುವ ಪಾನೀಯ ಕೊಟ್ಟು ಗಂಡನಿಂದ ಅತ್ಯಾಚಾರ ಮಾಡಿಸಿದ್ದ ಬ್ಯೂಟಿಷಿಯನ್ ಮಹಿಳೆಯನ್ನು ಪೊಲೀಸರು ಬಂಧಿಸಿರುವ…
ಚಲಿಸುತ್ತಿದ್ದ ಬಸ್ ಮೇಲೆ ವಿದ್ಯುತ್ ಕಂಬ ಉರುಳಿ ಬಿದ್ದ ಘಟನೆ ಮೈಸೂರಿನಲ್ಲಿ ನಡೆದಿದೆ.
ಹುಬ್ಬಳ್ಳಿಯಲ್ಲಿ ದಲಿತ ಸಮುದಾಯದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಗರ್ಭಿಣಿ ಮಾಡಿ ಪರಾರಿಯಾಗಿದ್ದ ಆರೋಪಿ ಸದ್ದಾಂ ಹುಸೇನ್…