ಬೆಂಗಳೂರು: ವಿಧಾನಸಭೆ ಚುನಾವಣೆ ಕಾವು ಏರುತ್ತಿದ್ದಂತೆ ಸಚಿವ ಮುನಿರತ್ನ ವಿವಾದದಲ್ಲಿ ಸಿಲುಕಿದ್ದಾರೆ. ಮುನಿರತ್ನ ಅವರು ಚುನಾವಣಾ ಪ್ರಚಾರದ ವೇಳೆ ಕನ್ನಡಿಗರ ಮೇಲೆ ಹಲ್ಲೆ ನಡೆಸಲು ಕರೆ ನೀಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕಿ ಕುಸುಮಾ ಹನುಮಂತರಾಯಪ್ಪ ದೂರು ನೀಡಿದ್ದಾರೆ.
ರಾಜರಾಜೇಶ್ವರಿ ನಗರದ ಖಾತಾನಗರದಲ್ಲಿ ತಮಿಳು ಭಾಷಿಕರನ್ನುದ್ದೇಶಿಸಿ ಮಾತನಾಡುವಾಗ ಮುನಿರತ್ನ ಕನ್ನಡಿಗರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ರಾಜರಾಜೇಶ್ವರಿ ನಗರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.
ಮುನಿರತ್ನ ಅವರ ಭಾಷಣದ ವೀಡಿಯೊ ವೈರಲ್ ಆಗಿದ್ದು, ಅದರಲ್ಲಿ “ಯಾರಾದರೂ ಒಳಗೆ ಬಂದರೆ, ಓಡಿ ಹೋಗಿ ಅವರನ್ನು ಹೊಡೆಯಿರಿ, ಉಳಿದವರನ್ನು ನಾನು ನೋಡುತ್ತೇನೆ. ಅವರು ಹಿಂತಿರುಗಿ ನೋಡದ ರೀತಿಯಲ್ಲಿ ಅವರನ್ನು ಹೊಡೆಯಬೇಕು. ಯಾರು ನಮ್ಮನ್ನು ಹೊಡೆಯುತ್ತಾರೆಂದು ನೋಡೋಣ, ನಾಳೆ ನಮ್ಮದಾಗುತ್ತದೆ” ಎಂದು ಅವರು ವೀಡಿಯೊದಲ್ಲಿ ಹೇಳಿದ್ದಾರೆ.