News Karnataka Kannada
Friday, May 03 2024
ಬೆಂಗಳೂರು ನಗರ

ಬೆಂಗಳೂರು: ನಾವು ಮೈತ್ರಿಗೆ ಸೈ, ಆದರೆ ಷರತ್ತುಗಳು ಅನ್ವಯ- ಎಚ್‌.ಡಿ ಕುಮಾರಸ್ವಾಮಿ

Bengaluru: We are ready for an alliance, but conditions apply: HD Kumaraswamy
Photo Credit : IANS

ಬೆಂಗಳೂರು: ಜೆಡಿಎಸ್‌ಗೆ ಬಿಜೆಪಿ ಅಥವಾ ಕಾಂಗ್ರೇಸ್‌ ನೊಂದಿಗೆ ಮೈತ್ರಿ ಮಾಡಿಕೊಳ್ಳುವುದರಲ್ಲಿ ಯಾವುದೇ ಅಸಮಾಧಾನವಿಲ್ಲ. ನಮ್ಮ ಷರತ್ತುಗಳನ್ನು ಪೂರೈಸುವ ಕಾಂಗ್ರೆಸ್‌ ಅಥವಾ  ಬಿಜೆಪಿಯೊಂದಿಗೆ ಮೈತ್ರಿಗೆ ನಾವು ಸಿದ್ಧ ಎಂದು ಹೆಚ್​ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಅಲ್ಲದೆ ಎಕ್ಸಿಟ್‌ ಪೋಲ್‌ಗಳ ಕುರಿತು ಮಾತನಾಡಿರುವ ಅವರು ಜೆಡಿಎಸ್ ಪಾರ್ಟಿಗೆ ಬಹಳ ಕಡಿಮೆ ಸೀಟ್​ಗಳು ಸಿಗುತ್ತವೆ ಎಂದು ಕೆಲ ಸಮೀಕ್ಷೆಗಳು ಹೇಳಿವೆ. ಆದರೆ ನನಗೆ 50 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ಈ ಬಾರಿ ನನ್ನ ಷರತ್ತುಗಳನ್ನು ಈಡೇರಿಸಲು ಒಪ್ಪುವ ಪಕ್ಷದೊಂದಿಗೆ ಹೋಗುತ್ತೇನೆ ಎಂದು ಹೆಚ್​ಡಿ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ಷರತ್ತುಗಳೇನು: ನಿರ್ದಿಷ್ಟವಾಗಿ ಹೇಳುವುದಾದರೆ, ಜೆಡಿಎಸ್ ಶಾಸಕರು ಜಲಸಂಪನ್ಮೂಲ, ವಿದ್ಯುತ್ ಮತ್ತು ಸಾರ್ವಜನಿಕ ಕೆಲಸಗಳಂತಹ ಖಾತೆಗಳನ್ನು ಪಡೆಯಬೇಕೆಂದು ಕುಮಾರಸ್ವಾಮಿ ಬಯಸಿದ್ದಾರೆ. ಜೆಡಿಎಸ್ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳನ್ನು ಜಾರಿಗೆ ತರಲು ಸಮ್ಮಿಶ್ರ ಪಕ್ಷದ ಪಾಲುದಾರರು ಅವಕಾಶ ನೀಡಬೇಕು ಎಂದು ಹೆಚ್​ಡಿ ಕುಮಾರಸ್ವಾಮಿ ತಮ್ಮ ಷರತ್ತುಗಳ ಬಗ್ಗೆ ವಿವರಿಸಿದ್ದಾರೆ.

ಸಮನ್ವಯ ಸಮಿತಿ ಬೇಡ: ಮಂಡ್ಯ ವಿಚಾರಕ್ಕೆ ಬರಬೇಡಿ: ಕುಮಾರಸ್ವಾಮಿ ಅವರಿಗೆ 2018ರಲ್ಲಿ ಕಾಂಗ್ರೆಸ್ ಜೊತೆ ಕೈಜೋಡಿಸಿದಾಗ ರಚನೆಯಾದ ಸಮ್ಮಿಶ್ರ ಸಮನ್ವಯ ಸಮಿತಿ ಬೇಕಿಲ್ಲವಂತೆ.  ತಮ್ಮ ಸಮ್ಮಿಶ್ರ ಪಾಲುದಾರ ಪಕ್ಷವು ಮಂಡ್ಯ ಮತ್ತು ಹಾಸನ ಕ್ಷೇತ್ರಗಳಿಂದ ದೂರವಿರಬೇಕು. ಯಾವುದೇ ಸಿದ್ಧಾಂತಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಚರ್ಚೆಯಿಲ್ಲದೆ ಮಾಡಬಾರದು ಎಂದು ಕುಮಾರಸ್ವಾಮಿ ತಮ್ಮ ಷರತ್ತುಗಳನ್ನು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು