News Karnataka Kannada
Saturday, May 18 2024
ಬೆಂಗಳೂರು ನಗರ

ಬೆಂಗಳೂರು: ಮತದಾನದ ಅತ್ಯುತ್ತಮ ಚಿತ್ರಕಳುಹಿಸಿ ಬಹುಮಾನ ಗೆಲ್ಲಿ

Bengaluru: Win the best picture prize in the polls
Photo Credit : News Kannada

ಬೆಂಗಳೂರು: ಮೇ.10ರಂದು ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನ ವಿಭಿನ್ನ ಚಿತ್ರಗಳನ್ನು ಮಾಧ್ಯಮಗಳಲ್ಲಿ ಕಾರ್ಯನಿವರ್ಹಿಸುತ್ತಿರುವ ಮತ್ತು ಹವ್ಯಾಸಿ ಪತ್ರಿಕಾ ಛಾಯಾಗ್ರಾಹಕರು ಕಳಿಸುವ ಮೂಲಕ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿದೆ.

ಲೋಕಸಭಾ ಚುನಾವಣೆ 2019ರಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯ ಮೂಲಕ ಚುನಾವಣಾ ಸಂಬಂಧಿತ ಅತ್ಯುತ್ತಮ ಹಾಗೂ ಸಂಗ್ರಹಯೋಗ್ಯ, ಛಾಯಾಚಿತ್ರಗಳನ್ನು ಕೇಂದ್ರ ಚುನಾವಣಾ ಆಯೋಗ ಪ್ರಶಂಸಿಸುವುದರ ಜೊತೆಗೆ, ತನ್ನ ವರದಿ ಹಾಗೂ ಪುಸ್ತಕಗಳ ಮುಖಪುಟಗಳಲ್ಲಿ ಬಳಸಿಕೊಂಡಿತ್ತು. ಅದರಂತೆ ಕರ್ನಾಟಕ ವಿಧಾನಸಭೆ 2023 ನಿಮಿತ್ತ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯನ್ನು ಏರ್ಪಡಿಸಿ, ಅತ್ಯುತ್ತಮ ಛಾಯಾಚಿತ್ರ ತೆಗೆದ ಛಾಯಾಗ್ರಾಹಕರಿಗೆ ಪುಮಾಣ ಪತ್ರ ಹಾಗೂ ನಗದು ಬಹುಮಾನವನ್ನು ನೀಡಲಾಗುತ್ತಿದೆ.

ಸ್ಪರ್ಧೆಯಲ್ಲಿ ಭಾಗವಹಿಸಲಿಚ್ಛಿಸುವ ಪತ್ರಿಕಾ ಛಾಯಾಗ್ರಾಹಕರು, ಹವ್ಯಾಸಿ ಛಾಯಾಗ್ರಾಹಕರು ತಾವು ತೆಗೆದ ಗರಿಷ್ಠ 5 ಅತ್ಯುತ್ತಮ ಛಾಯಾಚಿತ್ರಗಳನ್ನು ಸೂಕ್ತ ಶೀರ್ಷಿಕೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೀಡಿರುವ ಪತ್ರಿಕಾ ಮಾನ್ಯತಾ ಕಾರ್ಡ್ ಅಥವಾ ತಮ್ಮ ಮಾಧ್ಯಮ ಕಚೇರಿ ನೀಡಿರುವ ಗುರುತಿನ ಚೀಟಿ ಅಥವಾ ಆಧಾರ್ ಕಾರ್ಡ್ ಹಾಗೂ ಮನೆ ವಿಳಾಸ, ಮೊಬೈಲ್ ಸಂಖ್ಯೆ ಸೇರಿದಂತೆ ಮತ್ತಿತರ ವಿವರಗಳೊಂದಿಗೆ ಇ-ಮೇಲ್ ಐಡಿ : ktkceomedia2023@gmail.com ಗೆ ಮೇ. 20ರ ಶನಿವಾರ ಸಂಜೆ 5 ಗಂಟೆಯೊಳಗೆ ಇ-ಮೇಲ್ ಮೂಲಕ ಸಲ್ಲಿಸಬಹುದಾಗಿದೆ.

ಆಯ್ಕೆಯಾಗುವ ಛಾಯಾಚಿತ್ರಗಳಿಗೆ ಪಥಮ ಬಹುಮಾನ ರೂ. 25,000/- ದ್ವಿತೀಯ ಬಹುಮಾನ 15,000/- ತೃತೀಯ ಬಹುಮಾನ 10,000/- ಹಾಗೂ ಸಮಾಧಾನಕರ ಬಹುಮಾನ 6,000/- ಮತ್ತು ವಿಶೇಷ ಬಹುಮಾನ 5,000/- ವನ್ನು ನೀಡಲಾಗುತ್ತದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು