ಬೆಂಗಳೂರು: ಆಕ್ಟೀವ್ ಹೋಂಡಾಗೆ ಅಪರಿಚಿತ ಗಾಡಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಹಿಂಬದಿ ಕುಳಿತಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರಿನ ಕಲ್ಯಾಣನಗರದ ಜಂಕ್ಷನ್ ಬಳಿ ನಡೆದಿದೆ.
ಶ್ವೇತಾ (23) ಸಾವನ್ನಪ್ಪಿದ ಮಹಿಳೆ. ಅಪರಿಚಿತ ಗಾಡಿ ಡಿಕ್ಕಿ ಹೊಡೆದ ರಭಸಕ್ಕೆ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಬೈಕ್ ಸವಾರನಾದ ಶ್ವೇತ ಪತಿ ಆನಂದ್ (28 ) ಸ್ಥಿತಿ ಗಂಭೀರವಾಗಿದೆ.
ಹೆಚ್.ಬಿ. ಆರ್ ಮುಖ್ಯ ರಸ್ತೆ ಬಳಿ ಇರುವ ಆಲ್ಟಿಯಸ್ ಆಸ್ಪತ್ರೆಯಲ್ಲಿ ಆನಂದ್ ಚಿಕಿತ್ಸೆ ನೀಡಲಾಗುತ್ತಿದೆ. ಇತ್ತೀಚೆಗಷ್ಟೆ ದಂಪತಿ ಮದ್ವೆಯಾಗಿದ್ದರು. ನೆನ್ನೆ ರಾತ್ರಿ ಫಿಲ್ಮ್ ನೋಡಿಕೊಂಡು ವಾಪಾಸಾಗುವ ವೇಳೆ ಘಟನೆ ನಡೆದಿದೆ.
ಶ್ವೇತಾಳ ಶವ ಅಂಬೇಡ್ಕರ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಬಾಣಸವಾಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.