ಬೆಂಗಳೂರು: ಕೆಲಸ ಕೊಡಿಸುವುದಾಗಿ ಬೆಂಗಳೂರಿಗೆ ಕರೆತಂದು ವೇಶ್ಯಾಟಿಕೆ ದಂಧೆಗೆ ನೂಕಿರುವ ಘಟನೆ ಬೆಳಕಿದೆ ಬಂದಿದೆ.
ವೇಶ್ಯಾವಾಟಿಕೆ ಅಡ್ಡ ಮೇಲೆ ದಾಳಿ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದ್ದು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಆಕೆಯ ಮೇಲೆ ಹಲವರು ಏಕಕಾಲಕ್ಕೆ ದೌರ್ಜನ್ಯ ಎಸಗಿರುವುದಾಗಿ ಸಂತ್ರಸ್ತ ಯುವತಿ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ.
ಕಳೆದ 3 ವರ್ಷಗಳ ಹಿಂದೆ ಮಂಡ್ಯ ಮೂಲದ ಯುವತಿಯನ್ನು ಪ್ರಿಯಕರನೇ ಬೆಂಗಳೂರಿಗೆ ಕರೆತಂದು ವೇಶ್ಯಾವಾಟಿಕೆ ಜಾಲಕ್ಕೆ ನೂಕಿದ್ದಾನೆ. ಕೆಲಸ ಕೊಡಿಸುವುದಾಗಿ ನಂಬಿಸಿ, ಮಂಜುಳಾ ಎಂಬ ಮಹಿಳೆಯ ಸಂಪರ್ಕಕ್ಕೆ ಪ್ರಿಯಕರ ಬಿಟ್ಟಿದ್ದ.
ವೇಶ್ಯಾವಾಟಿಕೆಗೆ ಶಿವಾನಂದ ಸರ್ಕಲ್ ಬಳಿ ಇರುವ ಸಾಯಿ ಲಾಡ್ಜ್ ಮಾಲೀಕ ಸಂತೋಷ್ ಕೂಡಾ ಬೆಂಬಲ ನೀಡುತ್ತಿದ್ದ ಎನ್ನಲಾಗಿದೆ.
ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಂಜುಳಾ, ಬ್ರಹ್ಮೇಂದ್ರ ಹಾಗೂ ಲಾಡ್ಜ್ ಮಾಲೀಕ ಸಂತೋಷ್ನನ್ನು ಪೊಲೀಸರು ಬಂಧಿಸಿದ್ದಾರೆ.