ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಮೈಸೂರು ರಾಜ ಮನೆತನದ ಯದವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ರೇಸ್ ಕೋರ್ಸ್ ಬಳಿಯ ಸಿಎಂ ಸರ್ಕಾರಿ ನಿವಾಸದಲ್ಲಿ ಸಿಎಂ ಬೊಮ್ಮಾಯಿಯವರನ್ನು ಯದವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿಯಾಗಿ ಔಪಚಾರಿಕವಾಗಿ ಮಾತುಕತೆ ನಡೆಸಿದ್ದಾರೆ.
ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಯದವೀರ ಕೃಷ್ಣದತ್ತ ಚಾಮರಾಜ ಒಡೆಯರ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಫೋಟೋ ಪೋಸ್ಟ್ ಮಾಡುವ ಮೂಲಕ ಹಂಚಿಕೊಂಡಿದ್ದಾರೆ. ಯದುವೀರ ಒಡೆಯರ್ ಸಿಎಂ ಪೋಸ್ಟನ್ನು ರಿ ಪೋಸ್ಟ್ ಮಾಡಿಕೊಂಡಿದ್ದಾರೆ.