ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಣಿಪುರಕ್ಕೆ ತೆರಳಿದ್ದರು, ಅಲ್ಲಿ ನಡೆಯಲಿರುವ ಭಾರತ್ ಜೋಡೋ ನ್ಯಾಯ್ ಯಾತ್ರೆ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಸಿಎಂ ಅವರಿಗೆ ಗೃಹ ಸಚಿವ ಜಿ.ಪರಮೇಶ್ವರ್ ಸಾಥ್ ನೀಡಿದ್ದಾರೆ. ಇಂದಿನಿಂದ ಭಾರತ್ ನ್ಯಾಯ್ ಯಾತ್ರೆ ಎಂಬ ಹೆಸರಿನಲ್ಲಿ ಮಣಿಪುರದಿಂದ ಮಹಾರಾಷ್ಟ್ರದ ಕಡೆಗೆ ರಾಹುಲ್ ಗಾಂಧಿ ಯಾತ್ರೆ ಮಾಡಲಿದ್ದಾರೆ. ಮಣಿಪುರದಿಂದ ಮುಂಬೈಗೆ 67 ದಿನಗಳ ಅವಧಿಯಲ್ಲಿ ಪಾದಯಾತ್ರೆ ಮಾಡಲಿದ್ದಾರೆ. ಇಂದಿನಿಂದ ಮಾರ್ಚ್ 20 ರವರೆಗೆ ಇಂಫಾಲ್ನಿಂದ ಮುಂಬೈಗೆ ಯಾತ್ರೆ ನಡೆಯಲಿದೆ.
ಈ ಯಾತ್ರೆಯು 66 ದಿನಗಳಲ್ಲಿ ಬಸ್ಸುಗಳು ಮತ್ತು ಕಾಲ್ನಡಿಗೆಯಲ್ಲಿ 6,713 ಕಿ.ಮೀಗಳನ್ನು ಕ್ರಮಿಸುವ ಗುರಿ ಹೊಂದಿದೆ.