ಬೆಂಗಳೂರು: ರಾಜ್ಯದಲ್ಲಿ ಭಾರಿ ಪ್ರವಾಹ ಬಂದಾಗ ಪ್ರಧಾನಿಯವರು ಇಲ್ಲಿಗೆ ಬರಲಿಲ್ಲ, ನೊಂದ ಜನರಿಗೆ ಸಾಂತ್ವನ ಹೇಳಲಿಲ್ಲ. ಆದರೆ ಈಗ ಅವರಿಗೆ ಕರ್ನಾಟಕದ ನೆನಪಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಕೋವಿಡ್ ವೇಳೆ ಮೋದಿ ರಾಜ್ಯದ ಜನರಿಗೆ ಆಕ್ಸಿಜನ್ ಕೊಟ್ಟರಾ? ಹೈಕೋರ್ಟ್ ಹೇಳಿದರೂ ಆಕ್ಸಿಜನ್ ಕೊಟ್ಟಿರಲಿಲ್ಲ. ಸುಪ್ರೀಂಕೋರ್ಟ್ ಚಾಟಿಬೀಸಿದ ಮೇಲೆ ಕೊಟ್ಟರು. ಆಕ್ಸಿಜನ್ ಇಲ್ಲದೆ ಸಾವಿರಾರು ಜನ ಸತ್ತರು. ಚಾಮರಾಜನಗರದಲ್ಲಿ 36 ಜನ ಸಾವನ್ನಪ್ಪಿದರು. ರಾಜ್ಯದ ಬೇರೆಡೆಯೂ ಆಕ್ಸಿಜನ್ ಇಲ್ಲದೆ ಸತ್ತರು .ಇದಕ್ಕೆಲ್ಲ ಯಾರು ಕಾರಣ ? ಇದೇ ಮೋದಿಯವರು ಎಂದು ಆರೋಪಿಸಿದರು.
ಆಕ್ಸಿಜನ್ ಕೊಡುವುದಕ್ಕೆ ಆಗದವರು ಈಗ ಯೋಗ ಮಾಡುವುದಕ್ಕೆ ಬಂದಿದ್ದಾರೆ. ಆಕ್ಸಿಜನ್ ಬಗ್ಗೆ ಪ್ರಧಾನಿಯವರು ಹೇಳಬೇಕು. 40 % ಕಮಿಷನ್ ಬಗ್ಗೆ ದೂರು ಕೊಟ್ಟರು ಯಾಕೆ ಚೌಕಿದಾರ್ ಇಲ್ಲಿಯವರೆಗೆ ಉತ್ತರ ಕೊಟ್ಟಿಲ್ಲ? ಸಬರ್ಬನ್ ಯೋಜನೆ ಹೇಳುತ್ತಲೇ ಬರುತ್ತಿದ್ದಾರೆ. ಅನಂತ್ ಕುಮಾರ್ ಕಾಲದಿಂದ ಹೇಳುತ್ತಿದ್ದಾರೆ. ಆದರೆ ಯೋಜನೆ ಮಾತ್ರ ಏನೂ ಆಗಿಲ್ಲ. ಮೋದಿಯವರಿಂದ ರಾಜ್ಯಕ್ಕೆ ದೊಡ್ಡ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅವರ ಸರ್ಕಾರ ಕರ್ನಾಟಕದಲ್ಲಿದ್ದು, ಲೂಟಿ ಹೊಡೆಯುತ್ತಿದೆ, ಭ್ರಷ್ಟಾಚಾರ ಹೆಚ್ಚಾಗಿದೆ. ಇದಕ್ಕೆಲ್ಲ ಪ್ರಧಾನಿಯವರು ಅನುಮತಿ ಕೊಟ್ಟಿದ್ದಾರಾ? ಈ ನಮ್ಮ ಪ್ರಶ್ನೆಗೆ ಅವರು ಉತ್ತರ ಕೊಡಲಿ ಎಂದರು.
ಯುನೈಟೆಡ್ ಅರಬ್ ಎಮಿರೇಟ್ಸ್ನ ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…
ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…
ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ನಡೆದಿದೆ.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…