News Karnataka Kannada
Friday, May 10 2024
ಬೆಂಗಳೂರು ನಗರ

ಬಿಜೆಪಿಯವರು ನಕಲಿ ಸುದ್ದಿ ಸೃಷ್ಟಿಕರ್ತರು: ಬಿಜೆಪಿಗೆ ಟ್ವೀಟ್‌ ಟಾಂಗ್‌

bjp-is-the-creator-of-fake-news
Photo Credit : Twitter

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟದ ಕೃಷಿ ಸಚಿವ ಚೆಲುವರಾಯ ಸ್ವಾಮಿ ವಿರುದ್ಧ ಲಂಚ ಕೇಳುತ್ತಿದ್ದಾರೆ ಎಂದು ಮಂಡ್ಯ ಜಿಲ್ಲೆಯ ಕೃಷಿ ಅಧಿಕಾರಿಗಳು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು. ಅಲ್ಲದೆ ಈ ವಿಚಾರ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಬಿಜೆಪಿ, ಕಾಂಗ್ರೆಸ್‌ ಸರ್ಕಾರದ ಸಚಿವರನ್ನು ಟ್ವಿಟರ್‌ನಲ್ಲಿ ತರಾಟೆಗೆತ್ತಿಕೊಂಡಿತ್ತು.

ಭ್ರಷ್ಟ ಎಟಿಎಂ ಸರ್ಕಾರದ ಮತ್ತೊಂದು ಕರ್ಮಕಾಂಡ ಅಧಿಕಾರಿಗಳಿಂದಲೇ ಬಯಲು! ಸ್ವಾಮಿ ಸಿದ್ದರಾಮಯ್ಯನವರೇ ಕೃಷಿ ಸಚಿವ ಚಲುವರಾಯಸ್ವಾಮಿ ಅವರ ರಾಜೀನಾಮೆ ಪಡೆಯಲು ರಾಹುಕಾಲಕ್ಕಾಗಿ ಕಾಯುತ್ತಿದ್ದೀರಾ ಬಾಯಿಬಿಡಿ ಸ್ವಾಮಿ ಎಂದು ಟ್ವೀಟ್‌ ಮಾಡಿದ್ದು, ಪತ್ರ ಮತ್ತು ಸಚಿವ ಚೆಲುವರಾಯ ಸ್ವಾಮಿ ಅವರ ಫೋಟೋ ಅಟಾಚ್‌ ಮಾಡಿತ್ತು. ಇದೀಗ ಆ ಟ್ವೀಟ್‌ ಗೆ ಕಾಂಗ್ರೆಸ್‌ ಸರಿಯಾಗಿಯೇ ತಿರುಗೇಟು ನೀಡಿದ್ದು, ಪತ್ರ ನಕಲಿ ಎಂದು ಹೇಳಿದೆ. ಕಾಂಗ್ರೆಸ್‌ ಪಕ್ಷದ ಟ್ವೀಟ್‌ನಲ್ಲಿರುವ ಅಂಶ ಈ ಕೆಳಗಿನಂತಿದೆ.

ಮಂಡ್ಯ ಜಿಲ್ಲೆಯ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎಂಬರ್ಥದಲ್ಲಿ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪತ್ರ ನಕಲಿಯಾದುದು ಎಂದು ಬಯಲಾಗಿದೆ. ಅಂತಹ ಅಧಿಕಾರಿಗಳು ಯಾರು ಜಿಲ್ಲೆಯಲ್ಲಿ ಇಲ್ಲ ಎಂದು ಮಂಡ್ಯದ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ. ಹೀಗಿದ್ದರೂ ಈ ಸಂಬಂಧ ಪರಿಶೀಲನೆ ನಡೆಸಿ, ಅಗತ್ಯ ಕಂಡುಬಂದಲ್ಲಿ ತನಿಖೆ ನಡೆಸುತ್ತೇವೆ.

@bjp4karnataka ದ ನಾಯಕರೇ ಇಂತಹ ನಕಲಿ ಪತ್ರವನ್ನಿಟ್ಟುಕೊಂಡು ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ನೀವೇ ಇದರ ಸೃಷ್ಟಿಕರ್ತರೋ? ಅಥವಾ ನಿಮ್ಮ “ಬ್ರದರ್ರೋ”?

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು