ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಬುಧವಾರ ಬೆಳಿಗ್ಗೆ ಚಾಮರಾಜನಗರ ಜಿಲ್ಲೆಯ ಎಂಎಂ ಹಿಲ್ಸ್ ದೇವಾಲಯದಿಂದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ವಿಜಯ ಸಂಕಲ್ಪ ಹೆಸರಿನಲ್ಲಿ ಏಕಕಾಲದಲ್ಲಿ ನಾಲ್ಕು ಯಾತ್ರೆಗಳನ್ನು ನಡೆಸಲು ಬಿಜೆಪಿ ಯೋಜಿಸುತ್ತಿದೆ.
ಗುರುವಾರ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಬೆಳಗಾವಿ ಜಿಲ್ಲೆಯ ನಂದಗುಡಿಯಿಂದ ಇದೇ ರೀತಿಯ ಯಾತ್ರೆಗೆ ಚಾಲನೆ ನೀಡಲಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಬಸವ ಕಲ್ಯಾಣ ಮತ್ತು ದೇವನಹಳ್ಳಿಯಿಂದ ಇನ್ನೂ ಎರಡು ಯಾತ್ರೆಗಳಿಗೆ ಚಾಲನೆ ನೀಡಲಿದ್ದಾರೆ.
ಈ ನಾಲ್ಕು ಯಾತ್ರಾ ಬಸ್ಸುಗಳು ಅಭಿವೃದ್ಧಿಯ ಸಂದೇಶದೊಂದಿಗೆ ಇಡೀ ರಾಜ್ಯದಲ್ಲಿ ಸುತ್ತಾಟ ನಡೆಸಲಿವೆ. ಮಾ.23 ಅಥವಾ 24ರಂದು ದಾವಣಗೆರೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಮಾರೋಪ ಭಾಷಣ ಮಾಡಲಿದ್ದಾರೆ.