ಬೆಂಗಳೂರು: ಜಮ್ಮು ಕಾಶ್ಮೀರದಲ್ಲಿ ಉಗ್ರರು ಮತ್ತು ಸೇನಾಪಡೆಗಳ ನಡುವೆ ಭಾರಿ ಸಂಘರ್ಷ ನಡೆಯುತ್ತಿದೆ. ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದಿದ್ದ ಎನ್ಕೌಂಟರ್ ನಲ್ಲಿ ಹುತಾತ್ಮರಾಗಿದ್ದ ಕರ್ನಾಟಕ ಮೂಲದ ಯೋಧ ಕ್ಯಾಪ್ಟನ್ ಎಂವಿ ಪ್ರಾಂಜಲ್ ಪಾರ್ಥೀವ ಶರೀರವನ್ನು ಶುಕ್ರವಾರ ಬೆಂಗಳೂರಿಗೆ ಕರೆತರಲಾಗಿದೆ.
ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಕರ್ನಾಟಕದ ಕ್ಯಾಪ್ಟನ್ ಪ್ರಾಂಜಲ್ ಪಾರ್ಥಿವ ಶರೀರ ಹೆಚ್ಎಎಲ್ ಏರ್ಪೋರ್ಟ್ಗೆ ತಲುಪಿದ್ದು, ನವೆಂಬರ್ 22ರಂದು ಜಮ್ಮು ಮತ್ತು ಕಾಶ್ಮೀರ ರಜೌರಿಯಲ್ಲಿ ಉಗ್ರರೊಂದಿಗೆ ಹೋರಾಡುವಾಗ ಎಂವಿ ಪ್ರಾಂಜಲ್ ಸೇರಿದಂತೆ ಐವರು ಯೋಧರು ಹುತಾತ್ಮರಾಗಿದ್ದರು.
ವಿಮಾನ ನಿಲ್ದಾಣದಲ್ಲಿ ಪ್ರಾಂಜಲ್ ಅವರ ಪತ್ನಿ, ತಂದೆ-ತಾಯಿ ಪಾರ್ಥೀವ ಶರೀರವನ್ನು ಬರಮಾಡಿಕೊಂಡರು. ಬಳಿಕ ಸೇನಾಧಿಕಾರಿಗಳು ಪ್ರಾಂಜಲ್ ಪಾರ್ಥೀವ ಶರೀರಕ್ಕೆ ಗೌರವ ವಂದನೆ ಸಲ್ಲಿಸಿದರು. ಇನ್ನು ವಿಮಾನ ನಿಲ್ದಾಣಕ್ಕೆ ಪ್ರಾಂಜಲ್ ಪಾರ್ಥೀವ ಶರೀರ ತಲುಪುತ್ತಿದ್ದಂತೆಯೇ ಸಿಎಂ ಸಿದ್ದರಾಮಯ್ಯ, ಇಂಧನ ಸಚಿವ ಕೆ.ಜೆಜಾರ್ಜ್, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಸಂಸದ ತೇಜಸ್ವಿ ಸೂರ್ಯ ಅವರು ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು.
In a solemn wreath-laying ceremony, #LtGenUpendraDwivedi, #ArmyCdrNC at Jammu#LtGenAnindyaSengupta, #COS_NC at #Poonch paid homage to Capt Shubham Gupta, Capt MV Pranjal, Hav Abdul Majid, L/Nk Sanjay Bisht & Ptr Sachin Laur who sacrificed their lives in the service of the Nation. pic.twitter.com/99H3eZhuLT
— RAHI KAPOOR (@RahiKapoor2) November 24, 2023