ಬೆಂಗಳೂರು: ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘ(ರಿ), ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಗಾಂಧಿ ಪ್ರತಿಷ್ಠಾನದ ಸಹಯೋಗ ಹಾಗೂ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯದ ನೆರವಿನೊಂದಿಗೆ ಜು. 30ರ ಶನಿವಾರದಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಕುಮಾರ ಪಾರ್ಕ್ ಪೂರ್ವ, ಗಾಂಧಿ ಭವನ ಬಾಪೂ ಸಭಾಂಗಣದಲ್ಲಿ ಕೃತಿ ಲೋಕಾರ್ಪಣೆ ಹಾಗೂ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನೆರವೇರಲಿದೆ.
ಈ ಕಾರ್ಯಕ್ರಮದಲ್ಲಿ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿನ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ್ ಕಾರ್ಯಕ್ರಮದ ಉದ್ಘಾಟನೆ ಹಾಗೂ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರಜಾವಾಣಿ ಪತ್ರಿಕೆಯ ಪ್ರಧಾನ ಸಂಪಾದಕ ರವೀಂದ್ರ ಭಟ್ ಕೃತಿಗಳ ಲೋಕಾರ್ಪಣೆ ಮಾಡಲಿದ್ದಾರೆ. ಮುಖ್ಯ ಅಥಿತಿಯಾಗಿ ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ನಾಡೋಜ ವೂಡೇ ಪಿ. ಕೃಷ್ಣ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರು ನಿಡಸಾಲೆ ಪುಟ್ಟಸ್ವಾಮಯ್ಯ, ಕಾರ್ಯಕ್ರಮದಲ್ಲಿ ಗಾಂಧಿ ಶಾಂತಿ ಪ್ರತಿಷ್ಠಾನದ ಅಧ್ಯಕ್ಷರು ಜೀರಿಗೆ ಲೋಕೇಶ್ ಇರಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪುರಸ್ಕೃತರು ಡಾ. ಗಜಾನನ ಶರ್ಮ, ಡಾ. ಶರಣು ಹುಲ್ಲುರು, ಜಮೀಲ್ ಸಾವಣ್ಣ ಹಾಗೂ ಡಾ. ವಿಜಯಾ ಭಾಗಿಯಗಲಿದ್ದಾರೆ.
ಈ ಸಂದರ್ಭದಲ್ಲಿ ಡಿ.ಕೆ ಮಂಜುಳಾ ಅವರ ‘ಮುಕ್ತೆ’ ಕವನ ಸಂಕಲನ, ಕುಂವೀ ಅವರ ‘ರಾಯಲ ಸೀಮಾ ಕಥೆಗಳು’, ಓಬಯ್ಯ ಬಿ ಅವರ ‘ಬಯಕೆಯ ಬೆನ್ನೇರಿ’, ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ ಅವರ ‘ತೌಲನಿಕ ಸಾಹಿತ್ಯ ಮೀಮಾಂಸೆ’ ತತ್ವ-ವ್ಯಾಪ್ತಿ-ಜಿಜ್ಞಾಸೆ, ಕೇಶವ ರೆಡ್ಡಿ ಹಂದ್ರಾಳ ಅವರ ‘ಬೆರಕೆ ಸೊಪ್ಪು’ ಪ್ರಬಂಧ ಸಂಕಲನ ಹಾಗೂ ಹೃದಯಶಿವ ಅವರ ‘ಕ್ಲಾಪ್ ಬೋರ್ಡ್’ ಸಿನಿಮಾ ಬರಹಗಳು ಲೋಕಾರ್ಪಣೆಗೊಳ್ಳಲಿದೆ.