ಬೆಂಗಳೂರು: ಇತ್ತೀಚೆಗೆ ಆನ್ ಲೈನ್ ಮೂಲಕ ಫುಡ್ ಆರ್ಡರ್ ಮಾಡುವವರ ಸಂಖ್ಯೆ ದಿನೇದಿನೇ ಹೆಚ್ಚಾಗುತ್ತಿದೆ. ಆನ್ ಲೈನ್ ಆಹಾರ ಸರಬರಾಜು ಮಾಡುವ ಕಂಪನಿಗಳ ನಡುವೆ ತೀವ್ರ ಸ್ಪರ್ಧೆಯಿದೆ. ಶೀಘ್ರದಲ್ಲಿ ಗ್ರಾಹಕರಿಗೆ ಆಹಾರ ತಲುಪಿಸಲು ಕಂಪನಿಗಳ ನಡುವೆ ತೀವ್ರ ಸ್ಪರ್ಧೆಯಿದೆ.
ಫುಡ್ ಡೆಲಿವರಿ ಮಾಡುವವರು ನಗರದ ಸಂಚಾರ ದಟ್ಟಣೆ ಮಧ್ಯೆ ಒತ್ತಡದಲ್ಲಿ ಕೆಲಸ ಮಾಡಬೇಕಾಗುತ್ತದೆ. ಹೀಗೆ ಆನ್ ಲೈನ್ ಮೂಲಕ ಫುಡ್ ಡೆಲಿವರಿ ಮಾಡುವ ವೇಳೆ ಅಪಘಾತಕ್ಕೀಡಾದರೆ ಅಂತವರ ರಕ್ಷಣೆಗೆ ಸರ್ಕಾರ ಮುಂದಾಗಿದೆ. ಸಿಎಂ ಸಿದ್ದರಾಮಯ್ಯನವರು ಇಂದು ಮಂಡಿಸಿದ ಬಜೆಟ್ ನಲ್ಲಿ ಇ ಕಾಮರ್ಸ್ ಕಂಪನಿಗಳಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗೆ 4 ಲಕ್ಷ ರೂಪಾಯಿಗಳ ಜೀವ ಮತ್ತು ಅಪಘಾತ ವಿಮೆಯನ್ನು ಘೋಷಿಸಿದೆ.