ಬೆಂಗಳೂರು: ಕರಾವಳಿಯ ಮಣ್ಣಿನ ಕ್ರೀಡೆ ಕಂಬಳ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆಯೋಜನೆಗೊಂಡು ಭರ್ಜರಿ ಯಶಸ್ಸು ಕಂಡಿತ್ತು. ಆದರೀಗ ಕಂಬಳ ಆಯೋಜನೆ ಮಾಡಿದವರ ವಿರುದ್ಧ ಪ್ರಕರಣ ದಾಖಲಾಗಿದೆ.
ನಿಯಮ ಉಲ್ಲಂಘಿಸಿ ಸಾರ್ವಜನಿಕ ಸ್ಥಳದಲ್ಲಿ ಫ್ಲೆಕ್ಸ್, ಬ್ಯಾನರ್ ಅಳವಡಿಸಿದ್ದಕ್ಕೆ ಬಿಬಿಎಂಪಿ ವಾರ್ಡ್ ನ ಕಂದಾಯ ನಿರೀಕ್ಷಕ ನೀಡಿದ ದೂರಿನ ಮೇರೆಗೆ ಕಂಬಳ ಆಯೋಜಕರ ವಿರುದ್ಧ ಸದಾಶಿವನಗರ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಕಂಬಳಕ್ಕೆ ಶುಭಾಶಯ ಕೋರಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಫ್ಲೆಕ್ಸ್, ಬ್ಯಾನರ್ ಹಾಕಿದ್ದರು.
ಆದ್ರೆ, ಕಂಬಳ ಆಯೋಜಕರು ಅನುಮತಿ ಪಡೆದಿರಲಿಲ್ಲ ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ದಾಳಿ ಮಾಡಿ ಫ್ಲೆಕ್ಸ್, ಬ್ಯಾನರ್ ತೆರವುಗೊಳಿಸಿತ್ತು. ಅಲ್ಲದೇ ದಂಡ ಸಹ ವಿಧಿಸಿತ್ತು. ಇದೀಗ ಪ್ರಕರಣ ದಾಖಲಿಸಿದೆ.