ಬೆಂಗಳೂರು: ಬೈಂದೂರು ಮೂಲದ ಬೆಂಗಳೂರಿನ ಉದ್ಯಮಿ ಬಾಬು ಗೋವಿಂದ ಪೂಜಾರಿ ಅವರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನಕ್ಕೆ ಒಳಗಾಗಿ ಜೈಲು ಸೇರಿದ್ದ ಚೈತ್ರಾ ಮತ್ತು ಸ್ನೇಹಿತ ಶ್ರೀಕಾಂತ್ಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಮೂರನೇ ಎಸಿಎಂಎಂ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, ಮಂಗಳವಾರ ಇಬ್ಬರು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಲಿದ್ದಾರೆ. ಪ್ರಕರಣದಲ್ಲಿ ಚೈತ್ರಾ ಎ1 ಆರೋಪಿಯಾಗಿದ್ದಾರೆ ಶ್ರೀಕಾಂತ್ ಎ2 ಆರೋಪಿಯಾಗಿದ್ದಾರೆ. ಚೈತ್ರಾ ಸೇರಿದಂತೆ 7 ಆರೋಪಿಗಳಿಗೆ ಸೆ.23 ರಂದು ಮೂರನೇ ಎಸಿಎಂಎಂ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಪ್ರಕಟಿಸಿತ್ತು. ಗೋವಿಂದಬಾಬು ಅವರ ಬಳಿಯಿಂದ ಚೈತ್ರಾ ಒಟ್ಟು 5 ಕೋಟಿ ರೂ. ಹಣ ಪಡೆದಿದ್ದರು. ಆದರೆ ಗೋವಿಂದಬಾಬು ಪೂಜಾರಿ ಅವರಿಗೆ ಟಿಕೆಟ್ ಸಿಗಲಿಲ್ಲ. ಬಳಿಕ ಗೋವಿಂದಬಾಬು ಕೊಟ್ಟ ಹಣವನ್ನು ಮರಳಿ ನೀಡುವಂತೆ ಕೇಳಿದ್ದಾರೆ. ಆದರೆ ಚೈತ್ರಾ ಹಣ ನೀಡಿರಲಿಲ್ಲ. ಹಣ ನೀಡದ ಕಾರಣ ಗೋವಿಂದಬಾಬು ದೂರಿನ ಆಧಾರದ ಮೇಲೆ ಸದ್ಯ ಸಿಸಿಬಿ ಪೊಲೀಸರು ಚೈತ್ರಾ ಮತ್ತು ಅವರ ಸ್ನೇಹಿತರನ್ನು ಬಂಧಿಸಿದ್ದರು.