ಬೆಂಗಳೂರು: ರಾಜ್ಯದಲ್ಲಿ ಮಂಕಿ ಪಾಕ್ಸ್ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಮಂಗಳವಾರ ಮಹತ್ವದ ಸಭೆ ನಡೆಯಲಿದೆ.
ಈ ಸಭೆಯಲ್ಲಿ ಆರೋಗ್ಯ ಅಧಿಕಾರಿಗಳು, ಸಚಿವ ಡಾ.ಕೆ.ಸುಧಾಕರ್, ಎಲ್ಲ ಜಿಲ್ಲಾಧಿಕಾರಿಗಳು ಭಾಗವಹಿಸಲಿದ್ದಾರೆ. ಮಂಕಿಪಾಕ್ಸ್ ಪ್ರಕರಣಗಳು ಹಾಗೂ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಈ ಸಭೆಯಲ್ಲಿ ಚರ್ಚಿಸಿ ಅಗತ್ಯ ವೈದಕೀಯ ಸಿದ್ಧತೆ ಮಾಡಿಕೊಳ್ಳುತ್ತೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಇದರ ಜತೆಗೆ ರಾಜ್ಯಾದ್ಯಂತ ವ್ಯಾಪಕವಾಗಿ ಮಳೆಯಾಗುತ್ತಿದೆ. ಕೆಲವೆಡೆ ಹಾನಿಯಾಗಿದೆ. ಈ ಬಗ್ಗೆಯೂ ಸಭೆ ನಡೆಸುತ್ತೇವೆ ಎಂದು ಹೇಳಿದರು.