ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಮುಖಂಡ ಎಚ್.ಡಿ ಕುಮಾರಸ್ವಾಮಿ ನಡುವಿನ ಫೈಟ್ ತಾರಕಕ್ಕೇರಿದೆ. ಈ ಹಿಂದೆ ಇಬ್ರಾಹಿಂ ನನ್ನದು ಒರಿಜಿನಲ್ ಜೆಡಿಎಸ್. ನಮ್ಮದು ಜಾತ್ಯತೀತ ಜೆಡಿಎಸ್. ಬಿಜೆಪಿಯೊಂದಿಗೆ ಮೈತ್ರಿಗೆ ನಮ್ಮ ಒಪ್ಪಿಗೆ ಇಲ್ಲಎಂದು ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದರು.
ಇದೀಗ ಈ ವಿಷಯದ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಒರಿಜಿನಲ್ ಅಂತ ಬೋರ್ಡ್ ಹಾಕಿಕೊಳ್ಳಲಿ ಎಂದು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಬ್ರಾಹಿಂ ಒರಿಜಿನಲ್ ಅಂತ ಬೋರ್ಡ್ ಹಾಕಿಕೊಳ್ಳಲಿ. ಉಚ್ಛಾಟನೆ ಮಾಡಿಕೊಳ್ಳಲಿ ಅವರು ಫ್ರೀ ಇದ್ದಾರೆ.
ಸಿಎಂ ಇಬ್ರಾಹಿಂ ಮಾತನ್ನು ಇಷ್ಟೊಂದು ಸೀರಿಯಸ್ ಆಗಿ ತೆಗೆದುಕೊಳ್ಳುವ ಆಗತ್ಯ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಇಬ್ರಾಹಿಂ ಅವರು ಏನು ಮಾಡುತ್ತಾರೆ ಮಾಡಲಿ. ದಯವಿಟ್ಟು ಇಂತಹ ಸಿಲ್ಲಿ ವಿಷಯವನ್ನು ಗಂಭೀರವಾಗಿ ತೆಗೆದುಕೊಳ್ಳಬೇಡಿ. ಪಕ್ಷದ ವಿಚಾರ ನಾವು ಬಗೆಹರಿಸಿಕೊಳ್ಳುತ್ತೇವೆ, ನೀವು ಹೆಚ್ಚು ತಲೆಕಡೆಸಿಕೊಳ್ಳಬೇಡಿ ಎಂದು ಮಾಧ್ಯಮದವರ ಮೇಲೆ ಹರಿಹಾಯ್ದರು.