News Karnataka Kannada
Tuesday, April 30 2024
ಬೆಂಗಳೂರು ನಗರ

ಹೈಕಮಾಂಡ್‌ ಅಂಗಳದಲ್ಲಿ ಸಿಎಂ ಆಯ್ಕೆ ಚೆಂಡು, ನಾಳೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಸಭೆ

Congres Logo
Photo Credit :

ಬೆಂಗಳೂರು: ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ಸಭೆ ಅಂತ್ಯಗೊಂಡಿದೆ. ನಗರದ ಶಾಂಗ್ರೀಲಾ ಹೊಟೇಲ್ ನಲ್ಲಿ ನಡೆದ ಸಭೆಯಲ್ಲಿ ಭಾಗಿಯಾದ ಶಾಸಕರಿಗೆ ಸಿಎಂ ಆಯ್ಕೆ ವಿಚಾರದಲ್ಲಿ ಒಮ್ಮತಕ್ಕೆ ಬರಲು ಸಾಧ್ಯವಾಗಿಲ್ಲ. ಸಭೆಯಲ್ಲಿ ಯಾವುದೇ ನಿರ್ಧಾರವನ್ನೂ ತೆಗೆದುಕೊಳ್ಳದೇ, ಸಿಎಂ ಆಯ್ಕೆ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮವಾಗಿರಲಿದೆ ಎಂಬ ಒಂದು ಸಾಲಿನ ನಿರ್ಣಯವನ್ನು ಕೈಗೊಳ್ಳಲಾಗಿದೆ.

ಹೈಕಮಾಂಡ್ ಗೆ ವೀಕ್ಷಕರು ಇಂದಿನ ಶಾಸಕಾಂಗ ಸಭೆಯ ವರದಿ ನೀಡಲಿದ್ದು, ಈ ವರದಿ ಆಧರಿಸಿ ಕಾಂಗ್ರೆಸ್ ಹೈ ಕಮಾಂಡ್ ಇನ್ನು ಒಂದು ಅಥವಾ ಎರಡು ದಿನಗಳಲ್ಲಿ ಕರ್ನಾಟಕಕ್ಕೆ ನೂತನ ಸಿಎಂ ಆಯ್ಕೆ ಮಾಡಲಿದೆ. ಈಗಾಗಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿ ತಲುಪಿದ್ದು, ನಾಳೆ ಸೋನಿಯಾ ಗಾಂಧಿ ಅವರೊಂದಿಗೆ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಈ ಮಧ್ಯೆ ಶಾಸಕಾಂಗ ಸಭೆ ಬಳಿಕ, ಸಿಎಂ ಆಯ್ಕೆ ಸಂಬಂಧ ಪ್ರತಿಯೊಬ್ಬ ಶಾಸಕರ ಅಭಿಪ್ರಾಯವನ್ನೂ ಸಂಗ್ರಹಿಸಲು ವೀಕ್ಷಕರು ಮುಂದಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು