ಬೆಂಗಳೂರು: ಜಿಲ್ಲಾಡಳಿತದಿಂದ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಯಾದ ಹಿನ್ನೆಲೆಯಲ್ಲಿ ಆಗಸ್ಟ್ 26ರಂದು ಮಡಿಕೇರಿಯಲ್ಲಿ ನಡೆಯಬೇಕಿದ್ದ ರ್ಯಾಲಿಯನ್ನು ಕಾಂಗ್ರೆಸ್ ಮುಂದೂಡಿದೆ.
ಈ ಸಂಬಂಧ ಮಾಜಿ ಸಿಎಂ ಸಿದ್ದರಾಮಯ್ಯ ಅವರು ನಿರ್ಧಾರ ಪ್ರಕಟಿಸಿದ್ದಾರೆ. ನಿಷೇಧಾಜ್ಞೆಯನ್ನು ಗಮನದಲ್ಲಿಟ್ಟುಕೊಂಡು, ಮಡಿಕೇರಿ ರ್ಯಾಲಿಯನ್ನು ಮುಂದೂಡಲು ನಾವು ನಿರ್ಧರಿಸಿದ್ದೇವೆ ಎಂದು ಅವರು ಹೇಳಿದರು.
ಆಗಸ್ಟ್ 18 ರಂದು ಕೊಡಗಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳುತ್ತಿದ್ದಾಗ ತಮ್ಮ ಕಾರಿನ ಮೇಲೆ ಮೊಟ್ಟೆ ಎಸೆದ ನಂತರ ಸಿದ್ದರಾಮಯ್ಯ ಈ ರ್ಯಾಲಿಯನ್ನು ಘೋಷಿಸಿದ್ದರು.