ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಕಾಂಟಿನೆಂಟಲ್ ಆಟೋಮೋಟಿವ್ಸ್ ಇಂಡಿಯಾ ಪ್ರೈ. ಲಿ. ಕಂಪೆನಿಯು ರಾಜ್ಯದಲ್ಲಿ ಹೂಡಿಕೆ ಮಾಡಲು ಕರ್ನಾಟಕ ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಂಡಿತು.
ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ ಹಾಗೂ ಕಾಂಟಿನೆಂಟಲ್ ಆಟೋಮೋಟಿವ್ಸ್ ಪ್ರೈ. ಲಿ. ನ ಅಧ್ಯಕ್ಷ ಮತ್ತು ಸಿಇಓ ಪ್ರಶಾಂತ್ ದೊರೆಸ್ವಾಮಿ ಒಪ್ಪಂದಗಳಿಗೆ ಸಹಿ ಮಾಡಿದರು.
ಈ ಸಂದರ್ಭದಲ್ಲಿ ಐಟಿ, ಬಿಟಿ, ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಮತ್ತು ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.