News Karnataka Kannada
Friday, May 10 2024
ಬೆಂಗಳೂರು ನಗರ

ಕೋವಿಡ್ ನಿಂದ ಮೃತಪಟ್ಟ ಕುಟುಂಬಕ್ಕೆ ಪರಿಹಾರ: ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

2,797 people tested positive for coronavirus in the last 24 hours in the country.
Photo Credit : Pixabay

ಬೆಂಗಳೂರು: ಕೋವಿಡ್‌ ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬಳಿಗೆ ಪರಿಹಾರ ಸಲ್ಲಿಕೆಗೆ ಜೂ. 30 ರವರೆಗೆ ಅವಧಿ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಈ ಮೊದಲು ಪರಿಹಾರಕ್ಕೆ ಅರ್ಜಿ ಸಲ್ಲಿಸಲು 2022ರ ಮಾ.20 ಕೊನೇ ದಿನ ಎಂದು ಸೂಚಿಸಲಾಗಿತ್ತು.

ಕರೊನಾದಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬಕ್ಕೆ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ತಲಾ 50,000 ರೂಪಾಯಿ ಪರಿಹಾರ ಧನ ವಿತರಿಸಲಾಗುತ್ತಿದೆ. ಕೋವಿಡ್​​ನಿಂದಾಗಿ ಸಾವು ದೃಢಪಟ್ಟಿದ್ದು, ಆರೋಗ್ಯ ಇಲಾಖೆಯ ದತ್ತಾಂಶದಲ್ಲಿ ಲಭ್ಯವಿಲ್ಲದ ಪ್ರಕರಣಗಳನ್ನು ಅಪರ ಜಿಲ್ಲಾಧಿಕಾರಿಗಳು/ಬಿಬಿಎಂಪಿ ಜಂಟಿ ಆಯುಕ್ತರ ಅಧ್ಯಕ್ಷತೆಯಲ್ಲಿ ರಚಿಸಲಾದ ಕುಂದು-ಕೊರತೆ ನಿವಾರಣಾ ಸಮಿತಿಯಲ್ಲಿ ತೀರ್ಮಾನಿಸಿ ಸ್ಟೇಟ್ ಕೋವಿಡ್ ವಾರ್ ರೂಂ ಲೈನ್ ಲಿಸ್ಟ್​ನಲ್ಲಿ ಸೇರ್ಪಡೆಗೊಳಿಸಿ ಎಸ್​ಡಿಆರ್​ಎಫ್ ಮಾರ್ಗಸೂಚಿಯನ್ವಯ ಪರಿಹಾರ ಪಾವತಿಸಲು ಸರ್ಕಾರ ಆದೇಶಿಸಿದೆ.

ಸುಪ್ರೀಂ ಕೋರ್ಟ್​ನ ಆದೇಶದಲ್ಲಿ ಕೋವಿಡ್​ನಿಂದ ಮೃತಪಟ್ಟ ವ್ಯಕ್ತಿಗಳ ಕಾನೂನುಬದ್ಧ ವಾರಸುದಾರರಿಗೆ ಪರಿಹಾರ ನೀಡಲು ಅರ್ಜಿ ಸ್ವೀಕಾರ ಹಾಗೂ ಅರ್ಹ ವ್ಯಕ್ತಿಗಳಿಗೆ ಪರಿಹಾರ ಪಾವತಿಸುವ ಕುರಿತು ನಿರ್ದೇಶನಗಳನ್ನು ನೀಡಲಾಗಿದೆ. ಇವುಗಳನ್ನು ಕಟ್ಟುನಿಟ್ಮಾಗಿ ಪಾಲಿಸುವಂತೆ ಹಾಗೂ ಅರ್ಜಿ ಸ್ವೀಕೃತಿಗೆ ಕಾಲಮಿತಿ ನಿಗದಿಪಡಿಸಲಾಗಿದೆ. ಆದರೆ, ಜಿಲ್ಲೆಗಳಿಂದ ಸ್ವೀಕೃತವಾದ ಕೋರಿಕೆಯ ಮೇರೆಗೆ ಗಡುವು ವಿಸ್ತರಿಸಿ ಸರ್ಕಾರ ಸುತ್ತೋಲೆ ಹೊರಡಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು