ಬೆಂಗಳೂರು: ವಂಚಕರು ವಿವಿಧ ವೇಷ ಧರಿಸಿ ಜನರನ್ನು ಮೂರ್ಖರನ್ನಾಗಿಸಿ ಮೋಸ ಮಾಡುತ್ತಾರೆ. ಅಂತಹುದೇ ಒಂದು ಸುದ್ದಿ ಇಲ್ಲಿದೆ. ಸಿಎಂ, ಪಿಎಂ, ಮಿನಿಸ್ಟರ್ ಆಪ್ತನಂತೆ ನಟಿಸಿ ಹಲವರಿಗೆ ವಂಚಿಸಿದ್ದ ವ್ಯಕ್ತಿಯನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಸಂತೋಷ್ ಬಂಧಿತ ಆರೋಪಿ. ಇಂಜಿನಿಯರಿಂಗ್ ಪದವೀಧರನಾಗಿದ್ದ ಸಂತೋಷ್, ಹೂಡಿಕೆದಾರರನ್ನ ಪರಿಚಯ ಮಾಡಿಕೊಂಡು ಕೋಟಿ ಕೋಟಿ ಹಣ ಹೂಡಿಕೆ ಮಾಡಿಸಿ ಕಂಪನಿಯ ಹಣವನ್ನ ತನ್ನ ಅಕೌಂಟ್ ಗೆ ವರ್ಗಾಯಿಸಿಕೊಂಡು ವಂಚನೆ ಮಾಡುತ್ತಿದ್ದ. ಕುಂತಲ್ಲೇ ಹಣ ಮಾಡುತ್ತಿದ್ದ ಖತರ್ನಾಕ್ ಕಳ್ಳನನ್ನು ಮಹಾಲಕ್ಷ್ಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಸಂತೋಷ್ ತನಗೆ ದೊಡ್ಡ ದೊಡ್ಡವರ ಪರಿಚಯವಿದೆ ಎಂದು ನಂಬಿಸಿ ಹಲವು ಹೂಡಿಕೆದಾರರೊಂದಿಗೆ ಸ್ನೇಹ ಬೆಳೆಸಿದ್ದನು. ನನಗೆ ರಾಜ್ಯ ಹಾಗೂ ಕೇಂದ್ರ ಸಚಿವರು ಗೊತ್ತು ಎಂದು ಬಿಸಿನೆಸ್ ಮ್ಯಾನ್ಗಳಿಗೆ ನಂಬಿಸುತ್ತಿದ್ದ. ಬಳಿಕ ಪಿಎಂ, ಸಿಎಂ ಕಛೇರಿಯಿಂದ ಉದ್ಯಮಿಗಳಿಗೆ ಫೇಕ್ ಕಾಲ್ ಮಾಡ್ತಿದ್ದ. ಈತನೇ ಕಾಲ್ ಮಾಡಿ ಪಿಎಂ ಕಛೇರಿಯಿಂದ ಮಾತನಾಡುತ್ತಿದ್ದೇವೆ ಎಂದು ನಂಬಿಸುತ್ತಿದ್ದ. ಇದನ್ನ ನಂಬಿ ಸಂತೋಷ್ ಹೇಳಿದಂತೆ ಉದ್ಯಮಿಗಳು ಕೇಳುತ್ತಿದ್ದರು.
ಆತನ ಜೊತೆಗೂಡಿ ಕೋಟಿ ಕೋಟಿ ಹಣ ಹೂಡಿಕೆ ಮಾಡುತ್ತಿದ್ದರು. ಹಣ ಹೂಡಿಕೆ ಮಾಡುತ್ತಿದ್ದಂತೆ ಕಂಪನಿಯ ಹಣವನ್ನ ತನ್ನ ಅಕೌಂಟ್ ಗೆ ವರ್ಗಾಯಿಸಿಕೊಂಡು ಆರೋಪಿ ಸಂತೋಷ್ ವಂಚನೆ ಮಾಡುತ್ತಿದ್ದ. ಇಷ್ಟೇ ಅಲ್ಲದೆ ಮಠ, ಪ್ರಸಿದ್ಧ ದೇವಸ್ಥಾಗಳಲ್ಲೂ ಇದೇ ರೀತಿ ಹೇಳಿಕೊಂಡು ವಂಚನೆ ಮಾಡಿದ್ದಾನೆ. ಸುಳ್ಳನ್ನೇ ಬಂಡವಾಳ ಮಾಡಿಕೊಂಡು ವೇದಿಕೆಗಳಲ್ಲಿ ಸನ್ಮಾನ ಮಾಡಿಸಿಕೊಂಡು ಕೋಟ್ಯಾಧಿಪತಿಯಾಗಿದ್ದ ಸಂತೋಷ್ ಸದ್ಯ ಅರೆಸ್ಟ್ ಆಗಿದ್ದಾರೆ.
ಉತ್ತರ ಪ್ರದೇಶದಲ್ಲಿ 40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ. ದೇಶದೆಲ್ಲೆಡೆ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟದ…
ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರು ನಗರದ ಸಿವಿಲ್ ಲೈನ್ಸ್ನಲ್ಲಿರುವ ದೆಹಲಿ…
ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲಿನ ಹಲ್ಲೆಯನ್ನು ಖಂಡಿಸಿ ಮಾತನಾಡದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಕೇಂದ್ರ ಹಣಕಾಸು ಸಚಿವೆ…
ಈಜಲು ಹೋಗಿದ್ದ ಮೂವರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ.
ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ "ಪಟ್ಲ ಸಂಭ್ರಮ" ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ…
ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು…