ಬೆಂಗಳೂರು: ನಾಮಫಲಕಗಳಲ್ಲಿ ಕಡ್ಡಾಯ ಕನ್ನಡ ಬಳಸುವ ವಿಚಾರಕ್ಕೆ ಸಂಬಂಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಬುಧವಾರ ನಗರದ ಏರ್ ಪೋರ್ಟ್ ರಸ್ತೆಯ ಸಾದಹಳ್ಳಿ ಗೇಟ್ ನಿಂದ ಆರಂಭಿಸಿದ ಜಾಗೃತಿ ಮೆರವಣಿಗೆ ಪ್ರತಿಭಟನೆ ಸ್ವರೂಪ ಪಡೆದುಕೊಂಡಿದೆ.
ಕನ್ನಡಕ್ಕೆ ಅಗೌರವ ತೋರುವ ವ್ಯಾಪಾರಿಗಳ ಮೇಲೆ ಕೂಡಲೇ ಕಠಿಣ ಕ್ರಮಕ್ಕೆ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕನ್ನಡ ರಕ್ಷಣಾ ವೇದಿಕೆಯ ಕಾರ್ಯಕರ್ತರು ಬುಧವಾರ ದೇವಹಳ್ಳಿಯಲ್ಲಿ ರ್ಯಾಲಿ ನಡೆಸುತ್ತಿದ್ದು. ಈ ವೇಳೆ ಇಂಗ್ಲೀಷ್ ಭಾಷೆಯಲ್ಲಿದ್ದ ಜಾಹೀರಾತುಗಳ ಹರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇವನಹಳ್ಳಿಯ ಸಾದಹಳ್ಳಿ ಟೋಲ್ನಿಂದ ಬೆಂಗಳೂರು ಕಬ್ಬನ್ ಪಾರ್ಕ್ವರೆಗೆ ರ್ಯಾಲಿ ನಡೆಸಲಾಗುತ್ತಿದೆ. ಬೆಳಗ್ಗೆ 11 ಗಂಟೆಗೆ ಪ್ರತಿಭಟನಾ ರ್ಯಾಲಿ ಆರಂಭವಾಗಿದ್ದು, ಸಾದಹಳ್ಳಿ ಟೋಲ್ ಸಮೀಪ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.
ರ್ಯಾಲಿ ವೇಳೆ ಕೆಲ ಕಾರ್ಯಕರ್ತರು ಬೇರೆ ಭಾಷೆಗಳಲ್ಲಿದ್ದ ನಾಮಫಲಕ, ಜಾಹೀರಾತುಗಳನ್ನು ಹರಿದು ಹಾಕಿದ್ದಾರೆ. ಸಾದಹಳ್ಳಿಯ ಬ್ಲೂಮ್ ಹೋಟೆಲ್ ಬಳಿ ದ್ವಂಸ ಲೈಟಿಂಗ್ ಬೋರ್ಡ್ ಒಡೆದು ಹಾಕಿದ್ದಾರೆ. ಡಿಸಿಪಿ ಲಕ್ಷ್ಮೀಪ್ರಸಾದ್ ನೇತೃತ್ವದಲ್ಲಿ ಭದ್ರತಾ ವ್ಯವಸ್ಥೆ ಮಾಡಲಾಗಿದ್ದು, ಒಬ್ಬರು ಎಸಿಪಿ, 6 ಮಂದಿ ಇನ್ಸ್ಪೆಕ್ಟರ್, 12 ಸಬ್ ಇನ್ಸ್ಪೆಕ್ಟರ ಸೇರಿದಂತೆ 500 ಕ್ಕೂ ಹೆಚ್ಚು ಪೋಲಿಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಟೋಲ್ ಗೇಟ್ ಸಮೀಪ ಅಡಿಷನಲ್ ಕಮಿಷನರ್ ರಮಣ್ ಗುಪ್ತಾ ಅವರು ಕೂಡ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.