ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಪೊಲೀಸ್ ಇಲಾಖೆಯಲ್ಲಿ ಹೊಸ ವ್ಯವಸ್ಥೆಯೊಂದು ಜಾರಿಗೆ ಬರುತ್ತಿದೆ. ಬೆಂಗಳೂರಿನ ಆಗ್ನೇಯ ವಿಭಾಗ ಪೊಲೀಸರಿಂದ ಡಿಜಿಟಲೀಕರಣ ವ್ಯವಸ್ಥೆ ಮಾಡಲಾಗಿದೆ. 14 ಸ್ಟೇಷನ್, ಮೂರು ಎಸಿಪಿ ಕಚೇರಿ, ಡಿಸಿಪಿ ಕಚೇರಿಯಲ್ಲಿ ಡಿಸಿಪಿ ಸಿ.ಕೆ.ಬಾಬ ಅವರು ಆಡಳಿತ ವ್ಯವಸ್ಥೆ ಸಂಪೂರ್ಣ ಡಿಜಿಟಲೀಕರಣ ಮಾಡಿದ್ದಾರೆ. ರಾಜ್ಯ ಸರ್ಕಾರದ ಇ-ಆಫೀಸ್ ವೆಬ್ಸೈಟ್ ಬಳಸಿ ಪ್ರಾಯೋಗಿಕ ಯಶಸ್ವಿ. ಇ-ಮೇಲ್ ಮಾಡಿದ 1 ಗಂಟೆಯಲ್ಲೇ ಪೊಲೀಸ್ ಸಿಬ್ಬಂದಿ ಕೆಲಸ ಪೂರ್ಣ ಆಗಲಿದೆ.
ಸಿಬ್ಬಂದಿಗೆ ರಜೆ, ಪ್ರಮೋಷನ್ , ಹೆಲ್ತ್ ಸಮಸ್ಯೆ , ಸ್ಯಾಲರಿ, ರಿಟೈನ್ಮೆಂಟ್ ಸೆಟ್ಮಲೆಂಟ್ , ಟಪಾಲು ಡ್ಯೂಟಿ ಏನೇ ಇದ್ದರೂ ಸಹ ಇನ್ಮುಂದೆ ಡಿಸಿಪಿ ಕಚೇರಿಗೆ ಬರುವಂತಿಲ್ಲ. ಸ್ಥಳದಲ್ಲೇ ಆನ್ಲೈನ್ ಮೂಲಕ ಬೇಡಿಕೆ ಸಲ್ಲಿಸಬಹುದಾಗಿದೆ.
ಡಿಸಿಪಿ ಸಹಿ ಕೂಡಾ ಆನ್ ಲೈನ್ ಮೂಲಕವೇ ವ್ಯವಸ್ಥೆ ಮಾಡಲಾಗಿದ್ದು, ಇನ್ಮುಂದೆ ಡಿಸಿಪಿ ಕಚೇರಿಗೆ ದಾಖಲೆಗಳನ್ನ ಹಿಡಿದುಕೊಂಡು ಹೋಗುವಂತಿಲ್ಲ. ಇನ್ಸ್ ಪೆಕ್ಟರ್ ಸೇರಿದಂತೆ ಎಸಿಪಿ ಕೂಡಾ ಕಚೇರಿಯಲ್ಲಿ ಕುಳಿತಕೊಂಡೇ ಕೆಲಸ ಮಾಡಬಹುದು. ಬೇರೆ ಬಂದೋಬಸ್ತ್ ಅಥವಾ ಹೊರಗೆ ಡ್ಯೂಟಿ ಇದ್ದರೂ ಲ್ಯಾಟ್ ಟಾಪ್ ಮೂಲಕ ಸಂವಹನ ಮಾಡಬಹುದು. ಇದರೊಂದಿಗೆ ಡಿಜಿಟಲ್ ಮಾಡುವ ಮೂಲಕ ಸಮಯ ಉಳಿತಾಯ, ಇಲಾಖೆಯ ಹಣ ವ್ಯಯಕ್ಕೆ ಬ್ರೇಕ್ ಹಾಕಿದ್ದಾರೆ. ಇದೇ ಮೊದಲ ಬಾರಿಗೆ ಬೆಂಗಳೂರು ನಗರ ಪೊಲೀಸ್ ಇಲಾಖೆಯಲ್ಲಿ ಈ ಹೊಸ ವ್ಯವಸ್ಥೆ ಮಾಡಲಾಗಿದ್ದು, ಇದಕ್ಕೆ ಕಮಿಷನರ್ ದಯಾನಂದ್ ಪ್ರಶಂಸೆ ವ್ಯಕ್ತ ಪಡಿಸಿದ್ದಾರೆ.
ಆಮ್ ಆದ್ಮಿ ಪಕ್ಷಕ್ಕೆ ವಿದೇಶಿ ಮೂಲಗಳಿಂದ 7 ಕೋಟಿ ರೂ.ಗೂ ಹೆಚ್ಚು ದೇಣಿಗೆ ಸಿಕ್ಕಿರುವ ಬಗ್ಗೆ ಎಫ್ಸಿಆರ್ಎ ತನಿಖೆಯನ್ನು ಕೋರಿ…
ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗ…
ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರದ…
ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…
ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…
ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…