ನವದೆಹಲಿ: 2000 ಮುಖಬೆಲೆಯ ನೋಟು ಹಿಂಪಡೆಯುವಿಕೆ ನಿರ್ಧಾರವು 2016 ರಲ್ಲಿ ನೋಟು ಅಮಾನ್ಯೀಕರಣದ ಸಂದರ್ಭದಲ್ಲಿ ಉಂಟಾಗಿದ್ದ ಕಷ್ಟಕರ ಪರಿಸ್ಥಿತಿಯನ್ನು ಸೃಷ್ಟಿಸಿದೆ ಎಂದು ದೇಶಾದ್ಯಂತ ಇರುವ ಪೆಟ್ರೋಲಿಯಂ ಡೀಲರ್ಗಳನ್ನು ಪ್ರತಿನಿಧಿಸುವ ಅಖಿಲ ಭಾರತ ಪೆಟ್ರೋಲಿಯಂ ಡೀಲರ್ಸ್ ಅಸೋಸಿಯೇಷನ್ (ಎಐಪಿಡಿಎ) ಹೇಳಿದೆ.
ಗ್ರಾಹಕರು ಸಣ್ಣ ವಹಿವಾಟುಗಳಿಗೂ ಸಹ 2000 ರ ನೋಟುಗಳನ್ನೇ ಬಳಸಲು ಪ್ರಯತ್ನಿಸುತ್ತಿದ್ದಾರೆ, ಇದರಿಂದಾಗಿ ದೇಶಾದ್ಯಂತ ಪೆಟ್ರೋಲ್ ಪಂಪ್ಗಳಲ್ಲಿ ಚಿಲ್ಲರೆಯ ಅಭಾವ ಉಂಟಾಗಿದೆ ಎಂದು ಸಂಘವು ಸೋಮವಾರ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದೆ.ʼ
2,000 ರೂಪಾಯಿ ನೋಟು ಹಿಂತೆಗೆದುಕೊಳ್ಳುವಿಕೆಯನ್ನು ಘೋಷಿಸಿದಾಗಿನಿಂದ ನಗದು ವಹಿವಾಟಿನ ಸಂಖ್ಯೆ ಹೆಚ್ಚಾಗಿದೆ ಎಂದು ಎಐಪಿಡಿಎ ಅಧ್ಯಕ್ಷ ಅಜಯ್ ಬನ್ಸಾಲ್ ತಿಳಿಸಿದ್ದಾರೆ.
“ರೂ 2,000 ಹಿಂತೆಗೆದುಕೊಳ್ಳುವ ನಿರ್ಧಾರ ಪ್ರಕಟಗೊಳ್ಳುವ ಮೊದಲು, ನಮ್ಮ ನಗದು ಮಾರಾಟದಲ್ಲಿ 10% ಮಾತ್ರ ರೂ 2,000 ನೋಟಿನ ಮೂಲಕ ಸ್ವೀಕರಿಸುತ್ತಿದ್ದೆವು, ಆದರೆ ಈಗ ನಮ್ಮ ಔಟ್ಲೆಟ್ಗಳಲ್ಲಿ ಸ್ವೀಕರಿಸಿದ ಸುಮಾರು 90% ನಗದು ರೂ 2,000 ನೋಟುಗಳ ರೂಪದಲ್ಲಿದೆ” ಎಂದು ಪತ್ರಿಕಾ ಪ್ರಕಟಣೆ ಹೇಳಿದೆ.
ಈ ಅವಧಿಯಲ್ಲಿ ಮಾರಾಟದ ಹೆಚ್ಚಿದ ಕಾರಣ ಆದಾಯ ತೆರಿಗೆ ನೋಟೀಸ್ ಮತ್ತು ದಾಳಿಗಳ ಸಾಧ್ಯತೆಗಳ ಬಗ್ಗೆ ಬಗ್ಗೆ ಅಸೋಸಿಯೇಷನ್ ಕಳವಳ ವ್ಯಕ್ತಪಡಿಸಿದೆ. ನೋಟು ಅಮಾನ್ಯೀಕರಣದ ನಂತರ ಹೆಚ್ಚಿನ ವಿತರಕರು ತಮ್ಮ ತಪ್ಪಿಲ್ಲದೆ ಆದಾಯ ತೆರಿಗೆ ನೋಟಿಸ್ಗಳನ್ನು ಸ್ವೀಕರಿಸಿದ್ದರು, ಅಂದು ಎದುರಿಸಿದ ಸನ್ನಿವೇಶವನ್ನು ಈ ಬಾರಿಯೂ ಎದುರಿಸಬೇಕಾಗಬಹುದು ಎಐಪಿಡಿಎ ಆತಂಕ ವ್ಯಕ್ತಪಡಿಸಿದೆ ಎಂದು ವರದಿ ತಿಳಿಸಿದೆ
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ನಾಳೆ ಸೇಡಂಗೆ ಆಗಮಿಸಲಿದ್ದು, ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರ ಪ್ರಚಾರ…
ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿರುವ ಈಶ್ವರ ಖಂಡ್ರೆ, ಈ ಚುನಾವಣೆಯಲ್ಲಿ ಹೇಗಾದರೂ ಮಾಡಿ ಗೆಲ್ಲಲೆಬೆಕೆನ್ನುವ ಉದ್ದೇಶದಿಂದ, ಮನುಷ್ಯತ್ವ, ಮಾನವಿಯತೆ ಮರೆತು ಬಿಟ್ಟಿದ್ದಾರೆ,…
'ದೇಶದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ಹೊಕ್ಕಿ ಹೊಡೆಯುತ್ತಾರೆ' ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ…
ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಏಪ್ರಿಲ್ 29 ರಿಂದ ಮೇ…
ಸೆಲ್ಫಿ ತೆಗೆಯುವಾಗ ಕೆರೆಗೆಬಿದ್ದ ಮಗಳ ರಕ್ಷಣೆಗೆ ಹೋಗಿ ತಂದೆಯೂ ಸಾವನ್ನಪ್ಪಿದ ಧಾರುಣ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು ಕಾಮಸಮುದ್ರ…
ಬಸನಗೌಡ ಪಾಟೀಲ್ ಯತ್ನಾಳ್ ಬಾಯಿ, ಬೊಂಬಾಯಿ. ಅವ್ರು, ಬೆಳಿಗ್ಗೆ, ಮಧ್ಯಾಹ್ನ, ರಾತ್ರಿ, ಮಲಗಿ ಎಚ್ಚರಾದ್ಮೇಲೆ ಒಂದು ಹೇಳ್ತಾರೆ. ಇವ್ರ ಮಾತನ್ನ…