ಬೆಂಗಳೂರು: ಕಾಂಗ್ರೆಸ್ ಪಕ್ಷ ನೀಡಿದ ಉಚಿತ ಗ್ಯಾರಂಟಿಗಳು ಈಗ ಅದೇ ಪಕ್ಷಕ್ಕೆ ಮುಳುವಾಗಿದೆ ಈಗಾಲೇ ರಾಜ್ಯದೆಲ್ಲೆಡೆ ವಿದ್ಯುತ್ ಬಿಲ್ ಕಟ್ಟಲು ನಿರಾಕರಿಸುವ, ಉಚಿತ ಬಸ್ ಪ್ರಯಾಣಕ್ಕೆ ಒತ್ತಾಯಿಸುವ ಘಟನೆಗಳು ನಡೆಯುತ್ತಿವೆ. ಅಲ್ಲದೆ ಇದು ವಿಪರೀತಕ್ಕೆ ಹೋಗಿ ಹಲ್ಲೆ ಮಾಡುವವರೆಗೂ ಮುಟ್ಟಿದೆ. ಈಗ ಜೆಡಿಎಸ್ ಮುಖಂಡ ಕುಮಾರಸ್ವಾಮಿ ಈ ಕುರಿತು ಮಾತನಾಡಿದ್ದು, ರಾಜ್ಯದ ಜನರು ಯಾರೂ ವಿದ್ಯುತ್ ಬಿಲ್ ಕಟ್ಟಬೇಡಿ. ಯಾವ ಮಹಿಳೆ ಕೂಡ ಟಿಕೆಟ್ ಪಡೆಯಬೇಡಿ. ಉಚಿತವಾಗಿ ಸರ್ಕಾರಿ ಬಸ್ಗಳಲ್ಲಿ ಪ್ರಯಾಣಿಸುವಂತೆ ಹೇಳಿದ್ದಾರೆ.
ಚುನಾವಣೆಗೂ ಮುನ್ನ ಗ್ಯಾರಂಟಿ ಘೋಷಿಸಿ ನಿನಗೂ ಫ್ರೀ ನನಗೂ ಫ್ರೀ ಎಂದು ಸಿದ್ದರಾಮಯ್ಯ ಹೇಳಿದ್ದರು. ಆದರೀಗ ಕಂಡಿಷನ್ಸ್ ಹಾಕುವ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಆರೋಪಿಸಿದರು. 5 ಗ್ಯಾರಂಟಿ ಫ್ರೀ ಎಂದಿದ್ದ ಸಿದ್ದರಾಮಯ್ಯ, ಮೊದಲ ಸಂಪುಟದಲ್ಲೇ ಗ್ಯಾರಂಟಿ ಜಾರಿ ಮಾಡುತ್ತೇವೆ ಎಂದಿದ್ದರು. ಆದರೆ ಈವರೆಗೆ ಜಾರಿ ಮಾಡಿಲ್ಲ. ಅವರು ಕುತಂತ್ರ ರಾಜಕಾರಣ ನಡೆಸಿ ರಾಜ್ಯದ ಜನರನ್ನು ವಂಚಿಸಿದ್ದಾರೆ.
ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಇದೀಗ ಬಾರಿ ಸದ್ದು ಮಾಡುತ್ತಿದ್ದು ಇವರ ಜೊತೆ ಅವರ ತಂದೆ…
ಬಂಡೀಪುರದಲ್ಲಿ ಸಪಾರಿಗೆ ತೆರಳಿದ್ದ ವಾಹನಗಳ ಸನಿಹದಲ್ಲೇ ಹುಲಿಯೊಂದು ಜಿಂಕೆಯನ್ನ ಭೇಟೆಯಾಡಿ ಎಳೆದೊಯ್ಯುತ್ತಿರುವ ದೃಶ್ಯ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದೆ.
ಮುಂಬರುವ 7 ಮೇ 2024 ರಂದು ಜರುಗುವ ಸಾರ್ವತ್ರಿಕ ವಿಜಯಪುರ (ಮೀಸಲು) ಲೋಕಸಭೆ ಚುನಾವಣೆ ಪ್ರಚಾರದ ಅಂಗವಾಗಿ ಸ್ಟಾರ್ ಪ್ರಚಾರಕರು…
ಜಿಲ್ಲೆಯ ಹಿರಿಯ ಮುತ್ಸದ್ದಿ ಹಾಗೂ ಮಾಜಿ ಶಾಸಕರಾದ ಶಿವಪುತ್ರಪ್ಪ ದೇಸಾಯಿಯವರನ್ನು ಭಾನುವಾರ ತಾಳಿಕೋಟೆಯಲ್ಲಿ ಲೋಕಸಭೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರೊ.ರಾಜು…
ಬೀದರ್ ಲೋಕಸಭಾ ಕ್ಷೇತ್ರದ ಎನ್ಡಿಎ ಅಭ್ಯರ್ಥಿಯಾಗಿರುವ ಕೇಂದ್ರ ಸಚಿವರಾದ ಭಗವಂತ ಖೂಬಾರವರು, ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾದ…
ಕರ್ನಾಟಕ ಪ್ರವಾಸದಲ್ಲಿರುವ ಮೋದಿಗೆ ಗೋ ಬ್ಯಾಕ್ ಘೋಷಣೆ ಎದುರಾಗಿದೆ. ಪ್ರಧಾನಿ ಮೋದಿ ಮತ್ತು ಕೇಂದ್ರ ಬಿಜೆಪಿ ಸರ್ಕಾರದ ಡಿಎನ್ಎ ಕರ್ನಾಟಕ…