News Karnataka Kannada
Friday, May 17 2024
ಬೆಂಗಳೂರು ನಗರ

ಸಯನ್ಸ್ ಪ್ರಾಜೆಕ್ಟ್ ಡಿಸೈನರ್ ಪ್ರವೀಣ್ ಭಟ್ ಇವರಿಗೆ “ಡಾ.ಯಂ ವಿಶ್ವೇಶ್ವರಯ್ಯ ತಾಂತ್ರಿಕ ಪ್ರಶಸ್ತಿ”

"Dr. M. Visvesvaraya Technical Award"
Photo Credit : News Kannada

ಬೆಂಗಳೂರು: ವಿಜ್ಞಾನ , ತಂತ್ರಜ್ಞಾನ ಮತ್ತು ತಾಂತ್ರಿಕ ಕ್ಷೇತ್ರದಲ್ಲಿ ನೀಡಿರುವ ಗಣನೀಯ ಸೇವೆಗಾಗಿ ಕರ್ನಾಟಕ ಸಾಂಸ್ಕೃತಿಕ ಪರಿಷತ್ತು ಬೆಂಗಳೂರು, ನೀಡುವ 2023 ನೇ ಸಾಲಿನ ರಾಜ್ಯ ಮಟ್ಟದ ” ಡಾ.ಯಂ ವಿಶ್ವೇಶ್ವರಯ್ಯ ತಾಂತ್ರಿಕ” ಪ್ರಶಸ್ತಿಯನ್ನು ಪ್ರವೀಣ್ ಭಟ್ ಇವರು ಬೆಂಗಳೂರಿನಲ್ಲಿ ಸ್ವೀಕರಿಸಿದರು.

ಕಲಾ, ವಾಣಿಜ್ಯ, ತಾಂತ್ರಿಕ ಮತ್ತು ವಿಜ್ಞಾನ ವಿಷಯಗಳಲ್ಲಿ ಶಿಕ್ಷಣ ಪಡೆದ ಬಹುಮುಖ ಪ್ರತಿಭೆಯಾಗಿರುವ ಇವರು ಕಳೆದ 25 ವರ್ಷಕ್ಕೂ ಶೈಕ್ಷಣಿಕ ಸುದೀರ್ಘ ಅವಧಿಯಲ್ಲಿ ವೃತ್ತಿಪರ ಕೌಶಲಾಭಿವೃದ್ದಿ ಉಪನ್ಯಾಸಕರಾಗಿ, ಶೈಕ್ಷಣಿಕ, ಕಲಾ, ವೈಜ್ಞಾನಿಕ ಹಾಗೂ ತಾಂತ್ರಿಕ ಕ್ಷೇತ್ರದಲ್ಲಿ ಶಾಲಾ, ಕಾಲೇಜು ವಿದ್ಯಾರ್ಥಿಗಳ 1500ಕ್ಕೂ ಅಧಿಕ ಜಿಲ್ಲಾ ರಾಜ್ಯ ಮತ್ತು ರಾಷ್ಟ್ರ ಮಟ್ಟದ ವೈಜ್ಞಾನಿಕ ಮಾದರಿಗಳಿಗೆ ಮಾರ್ಗದರ್ಶಕರಾಗಿದ್ದರು.

ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಆವರಣದಲ್ಲಿರುವ, ಅಕ್ಕಮಹಾದೇವಿ ಸಭಾಂಗಣದಲ್ಲಿ ಏ 9 ರಂದು ನಡೆದ ಕರ್ನಾಟಕ ವೈಭವ ಕಾರ್ಯಕ್ರಮದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಿರಿಯ ಸಾಹಿತಿಗಳ , ಗಣ್ಯರ ಉಪಸ್ಥಿತಿ ಯಲ್ಲಿ ಪ್ರಶಸ್ತಿ ಸ್ವೀಕರಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು