ಬೆಂಗಳೂರು: ಭಾರತದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಮೂರು ದಿನಗಳ ಹಿಂದೆ ಕರ್ನಾಟಕಕ್ಕೆ ಭೇಟಿ ನೀಡಿದ್ದು, ವಿಧಾನಸಭೆ ಚುನಾವಣೆ ಕುರಿತು ಸರಣಿ ಸಭೆಗಳನ್ನು ನಡೆಸಿದ್ದು, ಶನಿವಾರ ಈ ಸಂಬಂಧ ಸುದ್ದಿಗೋಷ್ಠಿ ನಡೆಸಿ ವಿವರಗಳನ್ನು ನೀಡಿದ್ದಾರೆ.
ಮೇ 24ಕ್ಕೆ ರಾಜ್ಯ ಸರ್ಕಾರದ ಅವಧಿ ಮುಗಿಯಲಿದ್ದು, ಚುನಾವಣೆ ಕುರಿತು ವಿವಿಧ ಪಕ್ಷಗಳಿಂದ ಸಲಹೆ ಪಡೆದಿದ್ದೇವೆ. ಗುಜರಾತ್ ಚುನಾವಣೆಯಲ್ಲಿ ಬಳಸಿದ ಇವಿಎಂ ಯಂತ್ರ ಬೇಡ ಎಂಬ ಕಾಂಗ್ರೆಸ್ ಬೇಡಿಕೆಯನ್ನು ಮುಖ್ಯ ಚುನಾವಣಾ ಆಯುಕ್ತರು ತಿರಸ್ಕರಿಸಿದ್ದಾರೆ.
ಮತಯಂತ್ರಗಳಲ್ಲಿ ಯಾವುದೇ ಲೋಪವಿಲ್ಲ ಎಂದು ಸ್ಪಷ್ಟಪಡಿಸಿದ್ದು, ಈ ಸಲದ ಚುನಾವಣೆಯಲ್ಲಿ ಹಣದ ಹರಿವು ಹೆಚ್ಚಿರುವ ಬಗ್ಗೆ ನಮಗೆ ಮಾಹಿತಿ ಇದೆ. ಪ್ರತಿ ಬ್ಯಾಂಕ್ ಚಟುವಟಿಕೆ ಮೇಲೆ ಕಣ್ಗಾವಲು ಇರಿಸಿದ್ದೇವೆ ಎಂದು ವಿವರಿಸಿದರು.