ಬೆಂಗಳೂರು, ಅ.8: ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಸಮಾನ ಅವಕಾಶಗಳು ಅಗತ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ರಾಷ್ಟ್ರೀಯ ಬಸವ ಪ್ರತಿಷ್ಠಾನವು ಆಯೋಜಿಸಿದ್ದ ‘ಸರ್ವಧರ್ಮ ಸಂಸತ್-2022’ ಉದ್ಘಾಟಿಸಿ ಮಾತನಾಡಿದ ಅವರು, ಬದಲಾವಣೆಗಳನ್ನು ತರಲು ಸಮಾನ ಅವಕಾಶಗಳನ್ನು ನೀಡಿದಾಗ, ಅವರು ತಮ್ಮ ಶಕ್ತಿ ಮತ್ತು ಸಾಮರ್ಥ್ಯಕ್ಕೆ ಅನುಗುಣವಾಗಿ ಬರುತ್ತಾರೆ ಎಂದು ಹೇಳಿದರು. ಅವರಿಗೆ ಅವಕಾಶಗಳನ್ನು ನಿರಾಕರಿಸಿದರೆ ಮತ್ತು ತುಳಿತಕ್ಕೊಳಗಾದರೆ ಮತ್ತು ತಲೆಮಾರುಗಳಿಂದ ಸಮಸ್ಯೆಗಳನ್ನು ಎದುರಿಸಿದರೆ ಆರೋಗ್ಯಕರ ಸಮಾಜವನ್ನು ನಿರ್ಮಿಸಲು ಸಾಧ್ಯವಿಲ್ಲ.
“ಎಸ್ಸಿ/ಎಸ್ಟಿ ಮೀಸಲಾತಿಯನ್ನು ಹೆಚ್ಚಿಸಲು ನನಗೆ ಅವಕಾಶ ಸಿಕ್ಕಿದೆ. ನಮ್ಮ ಎಲ್ಲಾ ಪ್ರಯತ್ನಗಳು ಮಾನವೀಯತೆಯ ಕಡೆಗೆ ಇರಬೇಕು. ಧರ್ಮವು ಅದನ್ನು ತಲುಪಲು ಒಂದು ವಾಹನವಿದ್ದಂತೆ. ಅವರು ಇದನ್ನು ಅರ್ಥಮಾಡಿಕೊಂಡರೆ, ರಾಜ್ಯದಲ್ಲಿ ಮಾತ್ರವಲ್ಲದೆ ದೇಶ ಮತ್ತು ಜಗತ್ತಿನಲ್ಲಿ ಪ್ರೀತಿ ಮತ್ತು ವಾತ್ಸಲ್ಯ ಇರುತ್ತದೆ.
ಎಲ್ಲರಿಗೂ ಸಮಾನ ಅವಕಾಶ, ಗೌರವ, ಮತ್ತು ಕಾಯಕ ನಿಷ್ಠೆಯ ಬದುಕನ್ನು ಬಸವಣ್ಣ ಸಾರಿದ್ದಾರೆ. ಧರ್ಮದಲ್ಲಿ ಸಮಾನತೆ ಮಾತ್ರವಲ್ಲ, ಲಿಂಗ ಬೇಧ ಮರೆತು ಅಲ್ಲಿಯೂ ಸಮಾನತೆ ತರುವ ಅಗತ್ಯವಿದೆ. ಕೌಟುಂಬಿಕ ಸಮಾನತೆಯಿಂದ ಹಿಡಿದು ಮಾನವಕುಲಕ್ಕೆ ಸಮಾನತೆ ತರಬೇಕಿದೆ. ವೃತ್ತಿ ಗೌರವದ ಜೊತೆಗೆ ಮೇಲು ಕೀಳು ಇಲ್ಲದಿರುವುದು ಅಗತ್ಯ. ಜ್ಞಾನಕ್ಕೆ ಜಾತಿ, ಧರ್ಮ ಇಲ್ಲ. ಕಾಯಕ ಸಮುದಾಯಗಳು ತುಳಿತಕ್ಕೆ ಒಳಗಾದ ಸಂದರ್ಭದಲ್ಲಿ ಬಸವಣ್ಣ ಕೈಗೊಂಡ ವೈಚಾರಿಕ ಕ್ರಾಂತಿ, ಸಾಮಾಜಿಕ ಕ್ರಾಂತಿಯಾಗಿ ಬದಲಾಯಿತು. ತನ್ನನ್ನು ತಾನೇ ಇದಕ್ಕೆ ಅರ್ಪಿಸಿಕೊಳ್ಳುವ ಪ್ರಸಂಗ ಬಂದರೂ ಹಿಂದೆ ಮುಂದೆ ನೋಡಲಿಲ್ಲ. ಸಮಾಜದಲ್ಲಿ ಮತ್ತೊಮ್ಮೆ ಸಂಘರ್ಷ ದೂರ ಮಾಡಿ ಸಮಾನತೆ ತರುವ ಕಾಲ ಕೂಡಿ ಬಂದಿದೆ ಎಂದರು.
ಹುಟ್ಟುವಾಗ ನಮಗೆ ಯಾವುದೇ ಧರ್ಮ ಇರುವುದಿಲ್ಲ. ಜಗತ್ತನ್ನು ಬಿಟ್ಟು ಹೋಗುವಾಗಲೂ ಯಾವುದೇ ಧರ್ಮ ಇರುವುದಿಲ್ಲ. ಆದರೆ ಬದುಕಿನಲ್ಲಿ ನಾವು ಹಲವಾರು ಧರ್ಮಕ್ಕೆ ಸೇರುತ್ತೇವೆ. ನಂತರ ಜಾತಿ, ಉಪಜಾತಿ, ಪಂಗಡಕ್ಕೆ ಸೇರುತ್ತೇವೆ. ಇವೆಲ್ಲವೂ ಸಾಮಾಜಿಕ ವ್ಯವಸ್ಥೆ ಯಾಗಿ ನಾವು ಮನುಜರು ಕಾಲಕಾಲಕ್ಕೆ ಮಾಡಿಕೊಂಡಿರುವ ವ್ಯವಸ್ಥೆ. ಇದು ಸರಿ ತಪ್ಪು ಅನ್ನುವುದಕ್ಕಿಂತ ವ್ಯವಸ್ಥೆ ಅವಶ್ಯಕತೆ ಮತ್ತು ಅದರ ವ್ಯಾಪ್ತಿ ಎಷ್ಟಿರಬೇಕೆನ್ನುವುದು ಬಹಳ ಮುಖ್ಯ. ಮನುಷ್ಯ ಸಾಮಾಜಿಕ ಜೀವಿ. ಗುಂಪು, ನಗರಗಳಲ್ಲಿ ಬದುಕುತ್ತಾನೆ. ಧರ್ಮಗಳು ಮಾನವನ ಉದ್ಧಾರಕ್ಕಾಗಿ ಇದೆಯೇ ಹೊರತಾಗಿ ಸಂಘರ್ಷಕ್ಕಾಗಿ ಅಲ್ಲ. ಯಾವ ಧರ್ಮ ಸಂಘರ್ಷಕ್ಕೆ ಎಡೆ ಮಾಡಿಕೊಡುತ್ತದೆಯೋ ಅದು ಧರ್ಮವೇ ಅಲ್ಲ ಎಂದರು.