ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿ ರಾಷ್ಟ್ರೀಯ ನಾಯಕತ್ವವು ಕರ್ನಾಟಕದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಪಕ್ಷದ ಅತ್ಯುನ್ನತ ನಿರ್ಧಾರಕ ಮಂಡಳಿ ಸಂಸದೀಯ ಮಂಡಳಿಗೆ ಸೇರ್ಪಡೆಗೊಳಿಸಿದೆ.
ಮೊದಲ ಬಾರಿಗೆ ಯಡಿಯೂರಪ್ಪ ಅವರು ಮಂಡಳಿಗೆ ಸೇರ್ಪಡೆಗೊಂಡರು ಮತ್ತು ಅವರು ಮಂಡಳಿಯ ಅತ್ಯಂತ ಹಿರಿಯ ನಾಯಕರಾಗಲಿದ್ದಾರೆ.
ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರೊಂದಿಗೆ ಬೆಂಗಳೂರಿನಲ್ಲಿ ಪಕ್ಷದ ಸಭೆಯಲ್ಲಿ ಭಾಗವಹಿಸಿದ್ದಾಗ ಬಿಎಸ್ವೈ ಅವರಿಗೆ ಈ ನಿರ್ಧಾರವನ್ನು ತಿಳಿಸಲಾಯಿತು ಎಂದು ಮೂಲಗಳು ತಿಳಿಸಿವೆ.
ಪಕ್ಷಕ್ಕೆ ಸಂಬಂಧಿಸಿದ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಮಂಡಳಿಗೆ ಸೇರ್ಪಡೆಗೊಂಡಿದ್ದಕ್ಕಾಗಿ ಅವರನ್ನು ಸಭೆಯಲ್ಲಿ ಸನ್ಮಾನಿಸಲಾಯಿತು.