ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಿರಿಯ ಸಹೋದರ ರಾಮೇಗೌಡ (67) ಮೈಸೂರಿನಲ್ಲಿ ನಿಧನರಾಗಿದ್ದಾರೆ.
ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಕೊನೆಯುಸಿರೆಳೆದಿದ್ದಾರೆ
ಅವರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಅವರಿಗೆ ಸಿದ್ದರಾಮಯ್ಯ ಸೇರಿದಂತೆ ಇಬ್ಬರು ಒಡಹುಟ್ಟಿದವರಿದ್ದಾರೆ.
ಅವರ ಅಂತಿಮ ಸಂಸ್ಕಾರ ಇಂದು ಮಧ್ಯಾಹ್ನ ಸಿದ್ದರಾಮನಹುಂಡಿಯಲ್ಲಿ ನಡೆಯಲಿದೆ.