News Karnataka Kannada
Sunday, May 05 2024
ಬೆಂಗಳೂರು ನಗರ

ನನ್ನ ಹೆಸರಿನಲ್ಲಿ ನಕಲಿ ಪತ್ರ ಬರೆದರೆ ಕಾನೂನು ಕ್ರಮ: ಮಾಜಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

Ex CM Siddu warns legal action against fake letter in his name
Photo Credit : By Author

ಬೆಂಗಳೂರು: ತಮ್ಮ ಹೆಸರಿನಲ್ಲಿ ನಕಲಿ ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಕಾರ್ಯವೈಖರಿ ಬಗ್ಗೆ ಸಿದ್ದರಾಮಯ್ಯ ಅವರಿಗೆ ಅಸಮಾಧಾನವಿದೆ ಎಂದು ಈ ನಕಲಿ ಪತ್ರದಲ್ಲಿ ತೋರಿಸಲಾಗಿದೆ.

“ನನ್ನ ಹೆಸರನ್ನು ಬಳಸಿಕೊಂಡು ನಕಲಿ ಪತ್ರವೊಂದು ಹರಿದಾಡುತ್ತಿದೆ. ನನ್ನ ಮತ್ತು ಕೆಪಿಸಿಸಿ ಅಧ್ಯಕ್ಷರ ನಡುವಿನ ಸಂಬಂಧವನ್ನು ಹಾಳುಮಾಡುವ ದುರುದ್ದೇಶದಿಂದ ಕೆಲವು ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. ಈ ಪತ್ರಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸುತ್ತಿದ್ದೇನೆ. ಮುಂದಿನ ಚುನಾವಣೆಯಲ್ಲಿ ಗೆಲುವಿನ ಹಾದಿಯಲ್ಲಿರುವ ನಮ್ಮ ಪಕ್ಷದ ಬಗ್ಗೆ ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿಸುವ ಉದ್ದೇಶದಿಂದ ಈ ನಕಲಿ ಪತ್ರವನ್ನು ಬರೆಯಲಾಗಿದೆ. ನಾನು ಪೊಲೀಸರಿಗೆ ದೂರು ನೀಡಲಿದ್ದೇನೆ ಮತ್ತು ಈ ಅಪರಾಧದ ಹಿಂದಿನ ಅಪರಾಧಿಗಳನ್ನು ಕಂಡುಹಿಡಿದು ಶಿಕ್ಷಿಸಲಾಗುವುದು ಎಂದು ನಂಬುತ್ತೇನೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಕನ್ನಡದಲ್ಲಿರುವ ಈ ಪತ್ರ ಗುರುವಾರ ರಾತ್ರಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದನ್ನು ಸೋನಿಯಾ ಗಾಂಧಿ ಅವರಿಗೆ ಬರೆಯಲಾಗಿದೆ. ಈ ನಕಲಿ ಪತ್ರದ ಹಿಂದೆ ಬಿಜೆಪಿ ಕೈವಾಡವಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12429
Bhavana S.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು