ಬೆಂಗಳೂರು: ಬೆಂಗಳೂರಿನ ಸ್ಟಾರ್ಟ್ ಅಪ್ ಮಹಿಳಾ ಸಿಇಒ ಸುಚನಾ ತನ್ನ ಮಗನನ್ನು ಕೊಂದು ಸೂಟ್ ಕೇಸ್ ನಲ್ಲಿ ಸಾಗಿಸಿದ ಪ್ರಕರಣ, ಇದೀಗ ಈ ಮಗುವಿನ ಅಂತ್ಯಕ್ರಿಯೆ ಇಂದು ಹರಿಶ್ಚಂದ್ರ ಘಾಟ್ನಲ್ಲಿ ನಡೆದಿದೆ. ಮಗುವಿನ ತಂದೆ ವೆಂಕಟರಮಣ ಮತ್ತು ಸಂಬಂಧಿಕರಿಂದ ವಿಧಿ ವಿಧಾನಗಳ ಮೂಲಕ ಕೊನೆಯ ಕಾರ್ಯ ಮಾಡಿದ್ದಾರೆ. ತಂದೆ ವೆಂಕಟರಮಣ ಕೈಯಾರೆ ಮಗುವನ್ನು ಹರಿಶ್ಚಂದ್ರ ಫಾಟ್ಗೆ ಕೊಂಡೊಯ್ದು ಅಂತಿಮ ವಿಧಾನ ನೆರವೇರಿಸಿ, ಕಣ್ಣೀರಿನ ಮೂಲಕ ವಿದಾಯ ಹೇಳಿದ್ದಾರೆ.
ಮಗುವಿನ ಮರಣೋತ್ತರ ಪರೀಕ್ಷೆಯ ಬಳಿಕ ಐಮಂಗಲ ಪೊಲೀಸ್ ಠಾಣೆಯಿಂದ ಬೆಂಗಳೂರಿಗೆ ಮಗುವಿನ ಮೃತದೇಹ ರವಾನಿಸಲಾಗಿತ್ತು. ಮಧ್ಯರಾತ್ರಿ 1:45 ಕ್ಕೆ ಮಗುವಿನ ಮೃತದೇಹ ತಲುಪಿತ್ತು. ಯಶವಂತಪುರ ಬಳಿಇರುವ ಬ್ರಿಗೇಡ್ ಗೇಟ್ ವೇ ರೆಸಿಡೆನ್ಸಿಯಲ್ಲಿರುವ ತಂದೆ ವೆಂಕಟರಮಣ ನಿವಾಸವಿದ್ದು, ಮಗುವಿನ ತಂದೆ ಮತ್ತು ಕುಟುಂಬಸ್ಥರು ಸೇರಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ.
ಆಮ್ ಆದ್ಮಿ ಪಕ್ಷಕ್ಕೆ ವಿದೇಶಿ ಮೂಲಗಳಿಂದ 7 ಕೋಟಿ ರೂ.ಗೂ ಹೆಚ್ಚು ದೇಣಿಗೆ ಸಿಕ್ಕಿರುವ ಬಗ್ಗೆ ಎಫ್ಸಿಆರ್ಎ ತನಿಖೆಯನ್ನು ಕೋರಿ…
ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗ…
ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರದ…
ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…
ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…
ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…