ಬೆಂಗಳೂರು: ವಿದ್ಯುತ್ ದರ ಏರಿಕೆ ಖಂಡಿಸಿ ಎಫ್ ಕೆ ಸಿಸಿಐ ನಿಂದ ಜೂನ್.22ರಂದು ಕರ್ನಾಟಕ ಬಂದ್ ಗೆ ಕರೆ ನೀಡಿಲ್ಲ. ಜೂನ್.22ರಂದು ನಡೆಯುತ್ತಿರುವಂತ ಕರ್ನಾಟಕ ಬಂದ್ ಗೂ ನಮಗೂ ಸಂಬಂಧವಿಲ್ಲ ಎಂಬುದಾಗಿ ಎಫ್ ಕೆ ಸಿಸಿ ಐ ಅಧ್ಯಕ್ಷ ಬಿ.ವಿ ಗೋಪಾಲರೆಡ್ಡಿ ಸ್ಪಷ್ಟ ಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಸರ್ಕಾರದೊಂದಿಗೆ ವಿದ್ಯುತ್ ದರ ಏರಿಕೆಯ ಬಗ್ಗೆ ಚರ್ಚಿಸಿದ್ದೇವೆ. ಇಳಿಕೆಯ ಕ್ರಮ ಕೈಗೊಳ್ಳುವಂತೆಯೂ ಮನವಿ ಮಾಡಿದ್ದೇವೆ ಎಂದರು. ನಾವು ಈಗಾಗಲೇ ಇಂಧನ ಸಚಿವರನ್ನು ಭೇಟಿಯಾಗಿ ವಿದ್ಯುತ್ ದರ ಇಳಿಕೆ ಬಗ್ಗೆ ಚರ್ಚಿಸಿದ್ದೇವೆ. ಇಂಧನ ಇಲಾಖೆಯ ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿದ್ದೇವೆ. ಸರ್ಕಾರ ನಮ್ಮ ಜೊತೆ ಮಾತುಕತೆ ನಡೆಸಿದೆ. ಇತರೆ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿದ್ರೇ ಪ್ರತಿಕ್ರಿಯೆ ನೀಡಲ್ಲ ಎಂದರು.