ಬೆಂಗಳೂರು: ಚಿತ್ರದುರ್ಗದ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಅವರನ್ನು ಚಿತ್ರದುರ್ಗ ಪೊಲೀಸರು ಬಂಧಿಸಿದ್ದು, ಮಠದಿಂದ ಫೋಟೋ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿದ್ದಾರೆ.
ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯದ ಆರೋಪಕ್ಕೆ ಸಂಬಂಧಿಸಿದಂತೆ ಈಗ ಜೈಲಿನಲ್ಲಿರುವ ಶಿವಮೂರ್ತಿ ಮಠಾಧೀಶರ ಪ್ರತಿಸ್ಪರ್ಧಿ ಎಂದು ಅವರನ್ನು ಪರಿಗಣಿಸಲಾಗಿದೆ.
ಶಿವಮೂರ್ತಿ ಶ್ರೀಗಳನ್ನು ಬಂಧಿಸಿದ ನಂತರ ಮಠದಿಂದ ೪೭ ಫೋಟೋಗಳನ್ನು ಕಳವು ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಶಿವಮೂರ್ತಿ ಮಠಾಧೀಶರ ವಿರುದ್ಧದ ದೂರುಗಳ ಹಿಂದೆ ಬಸವರಾಜನ್ ಕೈವಾಡವಿದೆ ಎಂಬ ಆರೋಪವೂ ಇದೆ.