ಬೆಂಗಳೂರು: ಕರ್ನಾಟಕದಲ್ಲಿ ಅಧಿಕಾರ ಚುಕ್ಕಾಣಿ ಹಿಡಿದಿರುವ ಸಿದ್ದರಾಮಯ್ಯ ನೇತೃತ್ವದ ನೂತನ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಐದು ಗ್ಯಾರಂಟಿಗಳ ಘೋಷಣೆಯಾಗಿದೆ. ಅದರಲ್ಲಿ ೨೦೦ ಯೂನಿಟ್ ತನಕ ಉಚಿತ ವಿದ್ಯುತ್ ಕೂಡ ಒಂದು. ಈ ಘೋಷಣೆಯನ್ನು ಸರಕಾರ ಇನ್ನೂ ಅಧಿಕೃತವಾಗಿ ಜಾರಿಗೊಳಿಸಿಲ್ಲ. ಈ ಬೆನ್ನಲ್ಲೇ ದುಬಾರಿ ಎಲ್ಪಿಜಿ ಸಿಲಿಂಡರ್ ಗೆ ಗುಡ್ ಬೈ ಹೇಳುತ್ತಿರುವ ಹಳ್ಳಿ ಜನರು ಇದೀಗ ವಿದ್ಯುತ್ ಒಲೆ ಖರೀದಿಗೆ ಮುಂದಾಗಿದ್ದಾರೆ.
1125 ರೂ. ಕೊಟ್ಟು ಗ್ಯಾಸ್ ಸಿಲಿಂಡರ್ ಖರೀದಿಸುವುದಕ್ಕಿಂತ ಉಚಿತ ವಿದ್ಯುತ್ ಸಿಕ್ಕರೆ ಅಡುಗೆ ವೆಚ್ಚ ಇಳಿಯಬಹುದು ಅನ್ನುವ ನಿರೀಕ್ಷೆಯಲ್ಲಿ ಇದ್ದಾರೆ. ವಿಜಯ ನಗರ ಜಿಲ್ಲೆಯ ಹೂವಿನ ಹಡಗಲಿಯ ಜನ ವಿದ್ಯುತ್ ಒಲೆಗಳ ಮೊರೆ ಹೋಗಿದ್ದಾರೆ. ತಾತ್ವಿಕ ಒಪ್ಪಿಗೆ ಬೆನ್ನಲ್ಲೇ ಇಂತಹ ಬೆಳವಣಿಗೆ ನಡೆದಿರುವುದು ವಿಶೇಷ. ಮಹಿಳೆಯರು ಈಗ ವಿದ್ಯುತ್ ಒಲೆ ಖರೀದಿಸುತ್ತಿರುವುದರಿಂದ ವಿದ್ಯುತ್ ಒಲೆಯ ಮಾರಾಟದಲ್ಲಿ ಗಣನೀಯ ಪ್ರಮಾಣದ ಹೆಚ್ಚಳ ಕಂಡು ಬಂದಿದೆ ಎಂದು ತಿಳಿದು ಬಂದಿದೆ.
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್ಡ್ರೈವ್ ಪ್ರಕರಣ ಹಾಗೂ ಎಚ್.ಡಿ. ರೇವಣ್ಣ ವಿರುದ್ಧದ ಅಪಹರಣ…
ಕಳೆದ 3 ತಿಂಗಳಿನಿಂದ ಸರ್ಕಾರ 108 ಸೇವೆಯ ಸಿಬ್ಬಂದಿಗಳಿಗೆ ವೇತನ ನೀಡದೇ ಚೆಲ್ಲಾಟವಾಡುತ್ತಿದ್ದು, ಇದೀಗ ಇಂದು ರಾತ್ರಿಯಿಂದ ಸಿಬ್ಬಂದಿಗಳು ಬಂದ್…
ಚುನಾವಣಾ ಕರ್ತವ್ಯ ನಿರತ ಸಹಾಯಕ ಕೃಷಿ ಅಧಿಕಾರಿ ಆನಂದ ಅವರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಚಿಟಗುಪ್ಪ ತಾಲೂಕಿನ ಕೋಡಂಬಲ್ ಚೆಕ್ಪೋಸ್ಟ್ನಲ್ಲಿ…
ಕಾಂಗ್ರೆಸ್ ಪಕ್ಷ ರಾಮ ವಿರೋಧಿ, ಸನಾತನ ಧರ್ಮ ವಿರೋಧಿಯಾಗಿದೆ. ದೇಶ ವಿರೋಧಿ ಪಕ್ಷಗಳೊಂದಿಗೆ ಕೈ ಜೋಡಿಸಿದೆ ಎಂದು ಬಿಜೆಪಿ ರಾಷ್ಟ್ರೀಯ…
ಮುಧೋಳದಲ್ಲಿ ಚುನಾವಣಾ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ.
ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಇ.ಡಿ ಬಂಧನದ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ಜಾರ್ಖಂಡ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಜಾರ್ಖಂಡ್…