News Karnataka Kannada
Friday, May 03 2024
ಬೆಂಗಳೂರು ನಗರ

ಗಲಗಲಿ-ಮರೆಗುದ್ದಿ ಏತ ನೀರಾವರಿ ಯೋಜನೆ: 2035 ಹೆಕ್ಟೇರ್ ಭೂಮಿಗೆ ನೀರಾವರಿ- ಗೋವಿಂದ ಕಾರಜೋಳ

Govinda Karajola (2)
Photo Credit : News Kannada

ಬೆಳಗಾವಿ ; ಬಾಗಲಕೋಟ ಜಿಲ್ಲೆ ಜಮಖಂಡಿ ತಾಲ್ಲೂಕಿನ ಗಲಗಲಿ-ಮರೆಗುದ್ದಿ ಏತ ನೀರಾವರಿ ಯೋಜನೆಯನ್ನು 216 ಕೋಟಿ ರೂ.ವೆಚ್ಚದಲ್ಲಿ ವಿಸ್ತೃತ ಯೋಜನಾ ವರದಿ ಸರ್ಕಾರದ ಪರಿಶೀಲನೆಯಲ್ಲಿದೆ. ಈ ಯೋಜನೆಯಿಂದ ಎಂಟು ಗ್ರಾಮಗಳ 2035 ಹೆಕ್ಟೇರ್ ಜಮೀನಿಗೆ ನೀರಾವರಿ ಸೌಲಭ್ಯ ದೊರೆಯಲಿದೆ ಎಂದು ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ ಹೇಳಿದರು.

ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಆನಂದ ಸಿದ್ದು ನ್ಯಾಮಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಕಾರಜೋಳ ಅವರು, ಗಲಗಲಿ-ಮರೆಗುದ್ದಿ ಏತ ನೀರಾವರಿ ಯೋಜನೆಯನ್ನು 100 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲಾಗುವುದೆಂದು 2018-19 ರ ಆಯವ್ಯಯ ಭಾಷಣದಲ್ಲಿ ಘೋಷಣೆ ಮಾಡಲಾಗಿತ್ತು. ಈ ಯೋಜನೆಯ 216.50 ಕೋಟಿ ರೂ.ಮೊತ್ತದ ವಿಸ್ತೃತ ಯೋಜನಾ ವರದಿಯು ಆಡಳಿತಾತ್ಮಕ ಅನುಮೋದನೆಗಾಗಿ ಕರ್ನಾಟಕ ನೀರಾವರಿ ನಿಗಮದಿಂದ ಸ್ವೀಕೃತವಾಗಿದ್ದು,ಸರ್ಕಾರದ ಪರಿಶೀಲನೆಯಲ್ಲಿದೆ ಎಂದು ಅವರು ವಿವರಿಸಿದರು.

ಈ ಯೋಜನೆಯಿಂದ ಜಮಖಂಡಿ ತಾಲೂಕಿನ ಮರೆಗುದ್ದಿ, ಹುಲ್ಯಾಳ, ಸಿದ್ದಾಪುರ, ಜಮಖಂಡಿ, ಕೊಣ್ಣೂರ, ಬುದ್ನಿಹುಣಸಿಕಟ್ಟಿ , ಗಣಿ ಹಾಗೂ ಮುಧೋಳ ತಾಲೂಕಿನ ಶಿರೋಳ ಮತ್ತು ಬುದ್ನಿ ಪಿ.ಎಂ.ಗ್ರಾಮಗಳ ಸುಮಾರು 2035 ಹೆಕ್ಟೇರ್ ಜಮೀನುಗಳಿಗೆ ನೀರಾವರಿ ಸೌಲಭ್ಯ ಸಿಗಲಿದೆ. ಕೊಣ್ಣೂರು, ಸಿದ್ದಾಪುರ, ಜಮಖಂಡಿ ಮತ್ತು ಹುಣಸಿಕಟ್ಟೆ ಕೆರೆಗಳನ್ನು ತುಂಬಿಸಲು ಯೋಜಿಸಲಾಗಿದೆ ಎಂದು ಸಚಿವರು ಸದನದಲ್ಲಿ ವಿವರಿಸಿದರು.

ಗಲಗಲಿ-ಮರೆಗುದ್ದಿ ಏತ ನೀರಾವರಿ ಯೋಜನೆಯನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಶಾಸಕ ಆನಂದ ನ್ಯಾಮಗೌಡ ಅವರು ಸಚಿವರಲ್ಲಿ ಮನವಿ ಮಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು